11:52 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ದಾವಣಗೆರೆ: ಕೆರೆಗೆ ಹಾರಿ ಬೆಂಗಳೂರು ಮೂಲದ ಪ್ರೇಮಿಗಳಿಬ್ಬರ ಆತ್ಮಹತ್ಯೆ; ಪ್ರೀತಿಗೆ ಮನೆಯವರ ವಿರೋಧ?

18/08/2022, 18:18

ದಾವಣಗೆರೆ(reporterkarnataka.com): ಇಲ್ಲಿನ ಬೆಂಕಿಕೆರೆ ಗ್ರಾಮದ ಕೆರೆಗೆ ಹಾರಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಮೃತಪಟ್ಟ ಪ್ರೇಮಿಗಳನ್ನು ಬೆಂಗಳೂರು ಮೂಲದ ಚರಣ್ ಮತ್ತು ನಾಗವೇಣಿ ಎಂದು ಗುರುತಿಸಲಾಗಿದೆ.

ಚರಣ್ ಮತ್ತು ನಾಗವೇಣಿ ಅವರು ಆ.17ರಂದು ಬೈಕ್​ನಲ್ಲಿ ಬೆಂಕಿಕೆರೆ ಗ್ರಾಮದ ಕೆರೆಯ ಬಳಿ ಬಂದಿದ್ದರು. ಚರಣ್ ಬೆಂಗಳೂರಿನಲ್ಲಿ ಇರುವ ತನ್ನ ತಂದೆ ಮತ್ತು ಸ್ನೇಹಿತನಿಗೆ ಫೋನ್ ಮಾಡಿ ಇಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿ ಕೆರೆಗೆ ಹಾರಿದ್ದಾರೆ ಎನ್ನಲಾಗಿದೆ.

ನಂತರ ಮನೆಯವರು ನೀಡಿದ ಮಾಹಿತಿ ಪ್ರಕಾರ ಪೊಲೀಸರು ಕೆರೆಯ ಬಳಿ ಪರಿಶೀಲನೆ ನಡೆಸಿದಾಗ ಸ್ಥಳದಲ್ಲಿ ಯುವಕನ ಬೈಕ್ ಮತ್ತು ಇಬ್ಬರ ಚಪ್ಪಲಿ ಪತ್ತೆಯಾಗಿದ್ದು, ಇಂದು ಬೆಳಗ್ಗೆ ಇಬ್ಬರ ಮೃತದೇಹಗಳು ಪತ್ತೆಯಾಗಿದೆ. ಇವರಿಬ್ಬರ ಪ್ರೀತಿಯನ್ನು ಮನೆಯವರು ವಿರೋಧಿಸಿದಕ್ಕೆ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು