11:06 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಸಾವರ್ಕರ್ ಭಾವಚಿತ್ರ ಅಳವಡಿಸಲು ಸಿದ್ಧರಾಮಯ್ಯರ ಅನುಮತಿ ಬೇಕಾಗಿಲ್ಲ: ಶಾಸಕ ವೇದವ್ಯಾಸ್ ಕಾಮತ್ 

18/08/2022, 18:26

ಮಂಗಳೂರು(reporterkarnataka.com): ಮುಸಲ್ಮಾನರ ಏರಿಯಾದಲ್ಲಿ ಸಾವರ್ಕರ್ ಭಾವಚಿತ್ರ ಏಕೆ ಎಂಬ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಶಾಸಕ ವೇದವ್ಯಾಸ 

ಕಾಮತ್, ಮುಸಲ್ಮಾನರ ಏರಿಯಾಗಳಲ್ಲಿ ಸಾವರ್ಕರ್ ಚಿತ್ರ ಯಾಕೆ ಎನ್ನುವ ಸಿದ್ಧರಾಮಯ್ಯನವರೇ ಮುಸಲ್ಮಾರ ಏರಿಯಾಗಳು ಪಾಕಿಸ್ಥಾನದಲ್ಲಿವೆಯಾ ? ಭಾರತದಲ್ಲಿ ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ಭಾವಚಿತ್ರ ಬಳಸುವುದಕ್ಕೆ ಸಿದ್ಧರಾಮಯ್ಯ ಅಥವ ಕಾಂಗ್ರೇಸಿಗರ ಅನುಮತಿ ಬೇಕಿಲ್ಲ ಎಂದು ಹೇಳಿದ್ದಾರೆ.

ಸುಮ್ಮನೆ ಎರಡೆರಡು ಜೀವಾವಧಿ ಶಿಕ್ಷೆಯ ಬಿರುದು ಪಡೆದವರಲ್ಲ‌ ಸಾವರ್ಕರ್. ಅಂಡಮಾನಿನ ಕಡು ಕತ್ತಲೆ ಕೋಣೆಯೊಳಗೂ ಸ್ವಾತಂತ್ರ್ಯದ ಕುರಿತು ಚಿಂತಿಸುತ್ತಿದ್ದ ಅವರನ್ನು ವಿರೋಧಿಸುವ ಹಕ್ಕು ಯಾರಿಗೂ ಇಲ್ಲ. ಈ ದೇಶದ ಸ್ವಾತಂತ್ರ್ಯಕ್ಕಾಗಿ ಜೀವ ಸವೆಸಿದ ಕಾರಣಕ್ಕಾಗಿ ಅವರನ್ನು ಸ್ವಾತಂತ್ರ್ಯ ವೀರ ಎಂದು ಕರೆಯುತ್ತಾರೆಯೇ ವಿನಃ ತಮಗೆ ತಾವೇ ಭಾರತ ರತ್ನ ಕೊಟ್ಟಂತೆ ಪಡೆದ ಬಿರುದಲ್ಲ ಅದು. ಕರಿನೀರ ಶಿಕ್ಷೆ ದೂರದ ಮಾತು, ಐಷಾರಾಮಿ ವ್ಯವಸ್ಥೆಗಳಿದ್ದ ಜೈಲಿನೊಳಗೆ ರಾಜಕೀಯ ಖೈದಿಯಾಗಿ ಸೇರಿ ಅನಾರೋಗ್ಯದ ಕಾರಣ ನೀಡಿ ಕ್ಷಮಾರ್ಪಣೆ ಪತ್ರ ಬರೆದವರು ವೀರ ಸಾವರ್ಕರ್ ಕುರಿತು ಆಡಿಕೊಳ್ಳುವುದು ಹಾಸಾಸ್ಪದ ಎಂದು ಶಾಸಕ ಕಾಮತ್ ಕಿಡಿ ಕಾರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು