2:53 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಸಾವರ್ಕರ್ ಭಾವಚಿತ್ರ ಅಳವಡಿಸಲು ಸಿದ್ಧರಾಮಯ್ಯರ ಅನುಮತಿ ಬೇಕಾಗಿಲ್ಲ: ಶಾಸಕ ವೇದವ್ಯಾಸ್ ಕಾಮತ್ 

18/08/2022, 18:26

ಮಂಗಳೂರು(reporterkarnataka.com): ಮುಸಲ್ಮಾನರ ಏರಿಯಾದಲ್ಲಿ ಸಾವರ್ಕರ್ ಭಾವಚಿತ್ರ ಏಕೆ ಎಂಬ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಶಾಸಕ ವೇದವ್ಯಾಸ 

ಕಾಮತ್, ಮುಸಲ್ಮಾನರ ಏರಿಯಾಗಳಲ್ಲಿ ಸಾವರ್ಕರ್ ಚಿತ್ರ ಯಾಕೆ ಎನ್ನುವ ಸಿದ್ಧರಾಮಯ್ಯನವರೇ ಮುಸಲ್ಮಾರ ಏರಿಯಾಗಳು ಪಾಕಿಸ್ಥಾನದಲ್ಲಿವೆಯಾ ? ಭಾರತದಲ್ಲಿ ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ಭಾವಚಿತ್ರ ಬಳಸುವುದಕ್ಕೆ ಸಿದ್ಧರಾಮಯ್ಯ ಅಥವ ಕಾಂಗ್ರೇಸಿಗರ ಅನುಮತಿ ಬೇಕಿಲ್ಲ ಎಂದು ಹೇಳಿದ್ದಾರೆ.

ಸುಮ್ಮನೆ ಎರಡೆರಡು ಜೀವಾವಧಿ ಶಿಕ್ಷೆಯ ಬಿರುದು ಪಡೆದವರಲ್ಲ‌ ಸಾವರ್ಕರ್. ಅಂಡಮಾನಿನ ಕಡು ಕತ್ತಲೆ ಕೋಣೆಯೊಳಗೂ ಸ್ವಾತಂತ್ರ್ಯದ ಕುರಿತು ಚಿಂತಿಸುತ್ತಿದ್ದ ಅವರನ್ನು ವಿರೋಧಿಸುವ ಹಕ್ಕು ಯಾರಿಗೂ ಇಲ್ಲ. ಈ ದೇಶದ ಸ್ವಾತಂತ್ರ್ಯಕ್ಕಾಗಿ ಜೀವ ಸವೆಸಿದ ಕಾರಣಕ್ಕಾಗಿ ಅವರನ್ನು ಸ್ವಾತಂತ್ರ್ಯ ವೀರ ಎಂದು ಕರೆಯುತ್ತಾರೆಯೇ ವಿನಃ ತಮಗೆ ತಾವೇ ಭಾರತ ರತ್ನ ಕೊಟ್ಟಂತೆ ಪಡೆದ ಬಿರುದಲ್ಲ ಅದು. ಕರಿನೀರ ಶಿಕ್ಷೆ ದೂರದ ಮಾತು, ಐಷಾರಾಮಿ ವ್ಯವಸ್ಥೆಗಳಿದ್ದ ಜೈಲಿನೊಳಗೆ ರಾಜಕೀಯ ಖೈದಿಯಾಗಿ ಸೇರಿ ಅನಾರೋಗ್ಯದ ಕಾರಣ ನೀಡಿ ಕ್ಷಮಾರ್ಪಣೆ ಪತ್ರ ಬರೆದವರು ವೀರ ಸಾವರ್ಕರ್ ಕುರಿತು ಆಡಿಕೊಳ್ಳುವುದು ಹಾಸಾಸ್ಪದ ಎಂದು ಶಾಸಕ ಕಾಮತ್ ಕಿಡಿ ಕಾರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು