9:51 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮೊಟ್ಟೆ ಎಸೆಯೋದು ಹೇಡಿಗಳ ಕೆಲಸ; ಇವರಿಗೆ ಸರಕಾರ ನಡೆಸೋಕೆ ಬರೋಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ 

18/08/2022, 21:38

ಮಡಿಕೇರಿ(reporterkarnataka.com): ಮೊಟ್ಟೆ ಎಸೆಯೋದು ಹೇಡಿಗಳು ಮಾಡುವ ಕೆಲಸ. ಇವರು ಇಲ್ಲಿನ ಬಿಜೆಪಿ ಕಾರ್ಯಕರ್ತರಾ? ದುಡ್ಡು ಕೊಟ್ಟು ಇವರನ್ನೆಲ್ಲ ಕರೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಾಧ್ಯಮ ಜತೆ ಗುರುವಾರ ಮಾತನಾಡಿದ ಅವರು, ಇವರಿಗೆ ಸರಕಾರ ನಡೆಸೋಕೆ ಬರೋಲ್ಲ. ಸರಕಾರವೂ ಇಲ್ಲ. ಆಡಳಿತವೂ ಇಲ್ಲ. ಜನರ ಗಮನವನ್ನು ಬೇರೆ ಕಡೆಗೆ ಸೆಳೆಯಲು ಇದೆಲ್ಲ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಅವರು ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಲು ಗುರುವಾರ ಬೆಳಗ್ಗೆ ಕೊಡಗು ಜಿಲ್ಲೆಗೆ ಆಗಮಿಸಿದ್ದರು. ಪ್ರತಿಪಕ್ಷದ ನಾಯಕರೂ ಆಗಿರುವ ಅವರು ಕೊಡಗು ಜಿಲ್ಲೆ ಪ್ರವೇಶಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಎನ್ನಲಾದ ಗುಂಪೊಂದು ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿತ್ತು. ಈ ಸಂದರ್ಭದಲ್ಲಿ ಅವರ ಕಾರಿನೊಳಗೆ ಸಾವರ್ಕರ್ ಅವರ ಫೋಟೋವನ್ನು ಎಸೆಯಲಾಯಿತು. ಕಾರಿಗೆ ಮೊಟ್ಟೆ ಕೂಡ ಎಸೆಯಲಾಯಿತು. ಮಾಜಿ ಮುಖ್ಯಮಂತ್ರಿಗೆ ರಕ್ಷಣೆ ನೀಡಲು ಕೊಡಗು ಜಿಲ್ಲಾ ಪೊಲೀಸರು ವಿಫಲರಾಗಿದ್ದಾರೆ ಎಂಬ ಆರೋಪ ಕೂಡ ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು