6:53 AM Tuesday23 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ಸಾವರ್ಕರ್ ಪುತ್ಥಳಿ ನಿರ್ಮಾಣಕ್ಕೆ ಅನುಮತಿ ಕೋರಿ ಉಡುಪಿ ನಗರ ಸಭೆಗೆ ಪತ್ರ: ಯಶ್ ಪಾಲ್ ಸುವರ್ಣ

19/08/2022, 14:29

ಮಂಗಳೂರು(reporterkarnataka.com): ಇವತ್ತಿನ ಪೀಳಿಗೆಗೆ ಸಾವರ್ಕರ್ ಅವರ ಆದರ್ಶ, ಕೊಡುಗೆಗಳನ್ನು ತಿಳಿಸುವ ನಿಟ್ಟಿನಲ್ಲಿ ನಾವು ಕೇವಲ ಆ ಭಾಗದಲ್ಲಿ ಪ್ಲೆಕ್ಸ್ ಮಾತ್ರವಲ್ಲ ಪುತ್ಥಳಿ ನಿರ್ಮಾಣಕ್ಕೆ ಅನುಮತಿ ಕೋರಿ ಉಡುಪಿ ನಗರ ಸಭೆಗೆ ಪತ್ರವನ್ನು ಬರೆದಿದ್ದೇವೆ ಎಂದು ಬಿಜೆಪಿ ಹಿಂದುಳಿದ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.

ಉಡುಪಿ ಅಜ್ಜರಕಾಡಿನ ಬ್ರಹ್ಮಗಿರಿಯಲ್ಲಿ ವೀರ ಸಾವರ್ಕರ್ ಬ್ಯಾನರ್ ಅಳವಡಿಸಿ ವಿವಾದ ಉಂಟಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು,ಪುತ್ಥಳಿ ನಿರ್ಮಾಣದ ಬಗ್ಗೆ ಕೆಲ ಪುಂಡ ಕಾಂಗ್ರೆಸ್ಸಿಗರು ವಿರೋಧ ವ್ಯಕ್ತಪಡಿಸಿದ್ದಾರೆ. ಅವರಿಗೆ ಎಚ್ಚರಿಕೆ ನೀಡುತ್ತಿದ್ದೇನೆ. ಕಾಂಗ್ರೆಸ್ ನಾಯಕರ ಸಾವರ್ಕರ್ ಬಗ್ಗೆ ಸಲ್ಲದ ಹೇಳಿಕೆ ನೀಡುತ್ತಿದ್ದಾರೆ.

1970 ರಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ವೀರ್ ಸರ್ಕಾರ ಅವರ ಭಾವಚಿತ್ರವನ್ನು ಪೋಸ್ಟ್ ಸ್ಟ್ಯಾಂಪ್ ಅನ್ನು ಬಿಡುಗಡೆ ಮಾಡುವ ಮೂಲಕ ದೇಶಕ್ಕೆ ಅವರ ಕೊಡುಗೆ, ವಿಚಾರ ತಿಳಿಸುವ ಕೆಲಸವನ್ನು ಮಾಡಿದ್ದರು ಎಂದ ಯಶ್ನಾಲ್, ಮಾಜಿ ಸಿಎಂ ಸಿದ್ದರಾಮಯ್ಯನವರೇ ನಾನು ನಿಮಗೆ ನೇರವಾಗಿ ಸವಾಲು ಹಾಕುತ್ತಿದ್ದೇನೆ.

ನಿಮಗೆ ತಾಕತ್ತಿದ್ದರೆ ನಿಮ್ಮ ಕಾಂಗ್ರೆಸ್ ಕಛೇರಿಯಲ್ಲಿರುವ ಇಂದಿರಾ ಗಾಂಧಿಯವರ ಭಾವಚಿತ್ರವನ್ನು ತೆಗೆದು ಹಾಕಿ. ಮತ್ತೆ ಈ ಬಗ್ಗೆ ಮಾತನಾಡುವ ನೈತಿಕತೆ ನೀವು ಬನ್ನಿ ಆ ಸಂದರ್ಭದಲ್ಲಿ ನಾವು ನಿಮಗೆ ಉತ್ತರ ಕೊಡಲು ನಾವು ಸಿದ್ಧರಿದ್ದೇವೆ.

75 ವರ್ಷದ ಈ ಇಳಿ ವಯಸ್ಸಿನಲ್ಲಿ ಇಂತಹ ಮಾತುಗಳನ್ನು ಆಡುವುದು ಮಾಜಿ ಸಿಎಂ ಆದ ನಿಮಗೆ ಶೋಭೆ ತರುವಂಥದ್ದು ಅಲ್ಲ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು