5:28 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯಗೆ ಜೀವ ಬೆದರಿಕೆ: ಸಂಪೂರ್ಣ ತನಿಖೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ

20/08/2022, 10:42

ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆಯೊಡ್ಡಿರುವ ವಿಷಯವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಆ ಬಗ್ಗೆ ಸಂಪೂರ್ಣ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮತಾಡಿದ ಬೊಮ್ಮಾಯಿ, ನಾನು ನೇರವಾಗಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದು ಸಿದ್ದರಾಮಯ್ಯ ಅವರಿಗೆ ಅಥವಾ ಅವರ ಸಿಬ್ಬಂದಿಗೆ ಬೆದರಿಕೆ ಕರೆಗಳು ಬಂದಿದ್ದರೆ ವಿವರಗಳನ್ನು ನೀಡಲು ತಿಳಿಸಿದ್ದೇನೆ ಎಂದು ಹೇಳಿದರು.

ಈ ಕುರಿತು ಡಿಜಿ ಅವರನ್ನು ಕರೆದು ಮಾತನಾಡಿದ್ದು ಈ ವಿಚಾರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು. ಎರಡೂ ಕಡೆ ಇದು ನಡೆಯುತ್ತಿದ್ದು, ಇನ್ನೊಬ್ಬರ ಮನಸ್ಸಿಗೆ ಘಾಸಿ ಮಾಡುವಂತಹ ಪ್ರಚೋದನಕಾರಿ ಹೇಳಿಕೆಯನ್ನು ಕೊಡಬಾರದು. ಈ ಬಗ್ಗೆ ಕಟ್ಟುನಿಟ್ಟಾಗಿ ಆದೇಶಗಳನ್ನು ನೀಡಿ. ವಿರೋಧ ಪಕ್ಷದ ನಾಯಕರಿಗೆ ಸೂಕ್ತ ಭದ್ರತೆಯನ್ನು ಒದಗಿಸಲು ಸೂಚಿಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು