8:18 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಾತಾ ಅಮೃತಾನಂದಮಯಿ ಮಠದಲ್ಲಿ ಸಂಭ್ರಮೋಲ್ಲಾಸದ ಜನ್ಮಾಷ್ಟಮಿ: ಕೃಷ್ಣ ವೇಷ ಸ್ಪರ್ಧೆ

21/08/2022, 01:22

ಮಂಗಳೂರು(reporterkarnataka.com):.ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶ್ರದ್ಧಾ ಭಕ್ತಿ ಹಾಗೂ ಸಂಭ್ರಮೋಲ್ಲಾಸದ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.

ಮಂಗಳೂರಿನ ಶಾಖಾ ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣ ಇವರ‌ ಸಾರಥ್ಯದಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ಬೆಳಗ್ಗೆ ವಿದ್ಯಾರ್ಥಿಗಳಲ್ಲಿ ಭಾರತೀಯ ಸಂಸ್ಕೃತಿಯ ಉನ್ನತ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಚಿತ್ರಕಲಾ ಪ್ರದರ್ಶನ ಹಾಗೂ ಕೃಷ್ಣ ವೇಷ ಸ್ಪರ್ಧೆ ಹಮ್ಮಿಕೊಳ್ಳಲಾಯಿತು.

ಸಂಜೆ  ಶ್ರೀ ಕೃಷ್ಣನ ಬಾಲ ಲೀಲೆಗಳನ್ನು ನೆನಪಿಸುವ ಕ್ರೀಡೋತ್ಸವದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಕ,ಯುವತಿಯರು ಭಾಗವಹಿಸಿ ಸಂತೃಪ್ತಿ ಪಡೆದರು.

ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.

“ಅಯುಧ್”ನವರಿಂದ ಶ್ರೀ ಕೃಷ್ಣ ಹಾಗೂ ಕೃಷ್ಣನ ಉಪದೇಶಗಳ ಬಗ್ಗೆ ರಸಪ್ರಶ್ನೆ , “ಕೃಷ್ಣಾಮೃತ”ಎಂಬ ವಿಶೇಷ ಕಾರ್ಯಕ್ರಮದ ನಂತರ ಬಾಲಗೋಪಾಲ ಪೂಜೆ, ಭಜನೆ, ಆರತಿ, ಹಾಗೂ ಪ್ರಸಾದ ವಿತರಣೆ ಜರುಗಿತು.

ಅಮೃತ ಯುವ ಧರ್ಮ ಧಾರಾ(” ಅಯುಧ್”), ಮಾತಾ ಅಮೃತಾನಂದಮಯಿ ಸೇವಾ ಸಮಿತಿ ಹಾಗೂ ಅಮೃತ ವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ಅಮ್ಮನವರ ಭಕ್ತರು, ಅಮೃತ ವಿದ್ಯಾಲಯದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

ಸೇವಾ ಸಮಿತಿಯ ಅಧ್ಯಕ್ಷ ಡಾ.ವಸಂತ ಕುಮಾರ್ ಪೆರ್ಲ, ಶಾಲಾ ಪ್ರಾಂಶುಪಾಲೆ ಡಾ.ಆರತಿ ಶೆಟ್ಟಿ, ಅಯುಧ್ ಅಧ್ಯಕ್ಷೆ ಮೆಘನಾ ಬಿ ಮತ್ತು ಅಮೃತ ವಿದ್ಯಾಲಯ ನಿರ್ದೇಶಕ ಯತೀಶ್ ಬೈಕಂಪಾಡಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು