3:30 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಯಡ್ತರೆ: ನ್ಯಾನೋ‌ ಕಾರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ; ಪೊಲೀಸರ ದಾಳಿ, ಓರ್ವನ ಬಂಧನ, ಇನ್ನೋರ್ವ ಪರಾರಿ

21/08/2022, 17:42

ಬೈಂದೂರು(reporterkarnataka.com): ಕುಂದಾಪುರದಿಂದ ಭಟ್ಕಳಕ್ಕೆ ಗೋ ಮಾಂಸ ಸಾಗಾಟ ಮಾಡುತ್ತಿದ್ದ ನ್ಯಾನೋ‌ ಕಾರನ್ನು ತಡೆದು ನಿಲ್ಲಿಸಿದ ಬೈಂದೂರು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಇನ್ನೋರ್ವ ಕಾರಿನಿಂದ ಇಳಿದು ಪರಾರಿಯಾಗಿರುವ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.

ಭಟ್ಕಳ ನಿವಾಸಿ ಮಹಮ್ಮದ್ ಗೌಸ್ ಗವಾಯಿ(37)ಬಂಧಿತ ಆರೋಪಿ. ಪರಾರಿಯಾದ ಆರೋಪಿಯನ್ನು ನಜ್ಮುಲ್ ಎಂದು ತಿಳಿದು ಬಂದಿದೆ. ಕಾರನ್ನು ಪರಿಶೀಲನೆ ನಡೆಸಿದಾಗ ಹಿಂಬದಿಯಲ್ಲಿ ನೀಲಿ ಬಣ್ಣದ ಪಾಲಿಥೀನ್ ಶೀಟ್ ನಲ್ಲಿ ಗೋ ಮಾಂಸ ಇರುವುದು ಕಂಡು ಬಂದಿದೆ. 22 ಸಾವಿರ ಮೌಲ್ಯದ 150 ಕೆಜಿ ಗೋಮಾಂಸ ಪತ್ತೆಯಾಗಿದೆ. ಆರೋಪಿಗಳು ಇದನ್ನು ಭಟ್ಕಳದಲ್ಲಿ ಮದುವೆ ಕಾರ್ಯಕ್ರಮವೊಂದಕ್ಕೆ ತೆಗೆದುಕೊಂಡು ಹೋಗುತ್ತಿದ್ದರು ಎಂದು ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ಇತ್ತೀಚಿನ ಸುದ್ದಿ

ಜಾಹೀರಾತು