8:21 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಅಮೃತ ಮಹೋತ್ಸವ: ಮರಿಯ ನಿಲಯದ ವಿಶೇಷ ಸಾಮರ್ಥ್ಯವುಳ್ಳ ನಿವಾಸಿಗಳಿಗೆ ಸೋಲಾಪುರ ಚಾದರ, ಸಿಹಿ ತಿಂಡಿ ವಿತರಣೆ

21/08/2022, 19:49

ಮಂಗಳೂರು(reporterkarnataka.com):ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಸೊಸೈಟಿ, ವಲೆನ್ಸಿಯಾ ಶಾಖೆಯ ವತಿಯಿಂದ ಸ್ವಾತಂತ್ರ್ಯ ದಿವಸದ ಅಮೃತ ಮಹೋತ್ಸವದ ಅಂಗವಾಗಿ ಇನ್ಫೆಂಟ್ ಮೇರಿ ಕಾನ್ವೆಂಟಿನ ಮರಿಯ ನಿಲಯದ ವಿಶೇಷ ಸಾಮರ್ಥ್ಯವುಳ್ಳ ನಿವಾಸಿಗಳಿಗೆ ಆಗಸ್ಟ್ 17ರಂದು ಆಯೋಜಿಸಿದ ಕಾರ್ಯಕ್ರಮದಲ್ಲಿ ಸೋಲಾಪುರ ಚಾದರ ಮತ್ತು ಸಿಹಿ ತಿಂಡಿ ವಿತರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿ ಸೋಜ ಮಾತನಾಡಿ, “ಸಮಾಜ ಸೇವೆ ಮಾಡುವಲ್ಲಿ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಸೊಸೈಟಿ ಯಶಸ್ವಿಯಾಗಿದೆ”, ಗಳಿಸಿದ್ದಲ್ಲಿ ಒಂದು ಪಾಲನ್ನು ಸಮಾಜಕ್ಕೆ ನೀಡಬೇಕು ಎನ್ನುವ ವ್ಯವಸ್ಥಾಪಕ ನಿರ್ದೇಶಕರಾದ ಜಾರ್ಜ್ ಫೆರ್ನಾಂಡಿಸ್‌ರವರ ಕಲ್ಪನೆಯನ್ನು ಶ್ಲಾಘಿಸಿದರು. 

ಅತಿಥಿ ನಿವೃತ್ತ ಹಿರಿಯ ಶ್ರೇಣಿ ಅಧಿಕಾರಿ ಸಿಪ್ರಿಯನ್ ಪಿಂಟೋ ಅವರು ಮಾತನಾಡಿ, ಮುಂದೆಯೂ ಸಹಕಾರಿಯಿಂದ ಹಲವಾರು ಸಮಾಜಮುಖಿ ಕಾರ್ಯಗಳು ನಡೆಯಲಿ ಎಂದು ಆಶಿಸಿದರು. 

ಇನ್ಫೆಂಟ್ ಮೇರಿ ಕಾನ್ವೆಂಟಿನ ಸುಪೀರಿಯರ್ ಸಿ| ಸಿಲ್ವಿಯಾರವರು ಸಹಕಾರಿಯ ಬೆಳವಣಿಗೆಗೆ ಶುಭ ಹಾರೈಸಿದರು.  

ಅಭಿವೃದ್ಧಿ ವ್ಯವಸ್ಥಾಪಕರಾದ ಜೀವನ್ ಡಿ ಸೋಜ ಅವರು ಮಾತನಾಡುತ್ತಾ, ನಮ್ಮ ಸಹಕಾರಿ 9 ಜಿಲ್ಲೆಗಳಲ್ಲಿ, 111 ಶಾಖೆಗಳ ಮೂಲಕ ಕರ್ತವ್ಯ ನಿರ್ವಹಿಸಿದ್ದು ಇಂತಹ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವುದು ನಮಗೆಲ್ಲರಿಗೂ ಸಂತಸದ ವಿಚಾರ, ಇದಕ್ಕೆಲ್ಲಾ ಮೂಲ ಕಾರಣ ನಮ್ಮ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಜಾರ್ಜ್ ಫೆರ್ನಾಂಡಿಸ್‌ರವರು, ಅವರ ಸಹಕಾರವಿಲ್ಲದೆ ಸಂಸ್ಥೆ ಇಂತಹ ತೀರ್ಮಾನ ಕೈಗೊಳ್ಳಲು ಅಸಾಧ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 


ಶಾಖಾ ವ್ಯವಸ್ಥಾಪಕರಾದ ಪ್ರಜ್ವಲ್ ಜೆರೋಮ್ ಫ್ರೊಂಟೇರೊ, ಸಮಾಜ ಸೇವಕರಾದ ಆಸ್ಟನ್ ಡಿ ಕ್ಹುನಾ, ಹುಸೈನ್, ಹಬೀಬುಲ್ಲಾ ಹಾಗೂ ವಲೆನ್ಸಿಯಾ ಶಾಖೆಯ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮರಿಯ ನಿಲಯದ ನಿವಾಸಿಗಳು ಪ್ರಾರ್ಥನಾ ಗೀತೆಯನ್ನು ಹಾಡಿದರು. ದೀಪವನ್ನು ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪೂರ್ಣಶ್ರೀ ಸ್ವಾಗತಿಸಿದರು.

ರೀಮಾ ಲೂವಿಸ್ ವಂದಿಸಿದರು. ಎಲ್ವಿಟಾ ರೀಮಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು