1:11 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಆರೋಪಿ ಸಂಪತ್ ಯಾರೆಂದು ನಂಗೆ ಗೊತ್ತಿಲ್ಲ: ಜೀವಿಜಯ

22/08/2022, 12:04

ಮಡಿಕೇರಿ(reporterkarnataka.com):
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಆರೋಪಿ ಸಂಪತ್ ಯಾರೆಂದು ನನಗೆ ಗೊತ್ತಿಲ್ಲ. ನನ್ನ ಬೆಂಬಲಿಗ ಎಂದು ಹೇಳುವ ಮೂಲಕ ಸಂಪತ್ ನಿಂದ ನನ್ನ ಹೆಸರಿಗೆ ಕಪ್ಪುಚುಕ್ಕೆ ತರುವ ಷಡ್ಯಂತ್ರ ನಡೆಯುತ್ತಿದೆ. ಸಂಪತ್ ಕಾಂಗ್ರೆಸ್ ಕಾಯ೯ಕತ೯ ಎಂದು ಬಿಜೆಪಿಯವರು ನಿರೂಪಿಸಲಿ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಎ.ಜೀವಿಜಯ ಸವಾಲ್ ಹಾಕಿದ್ದಾರೆ.

ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವ ಸಂಪತ್ ಕಾಂಗ್ರೆಸ್ಸಿಗ ಅಲ್ಲವೇ ಅಲ್ಲ. ಜೀವಿಜಯ ಬೆಂಬಲಿಗ ಎಂದು ಹೇಳಿಕೊಂಡಿರುವ ಸಂಪತ್ ಒಂದೇ ಒಂದು ಉದಾಹರಣೆಯೊಂದಿಗೆ ಅದನ್ನು ನಿರೂಪಿಸಲಿ. ಮುಂದಿನ ಚುನಾವಣೆಯನ್ನು ದೖಷ್ಟಿಯಲ್ಲಿರಿಸಿಕೊಂಡು ಬಿಜೆಪಿಯಿಂದ 

ಷಡ್ಯಂತ್ರ ನಡೆದಿದೆ. ಬಿಜೆಪಿಯ ಎಂದಿನ ಷಡ್ಯಂತ್ರವನ್ನು ತಿಳಿಯದ ಜನತೆ ಕೊಡಗಿನಲ್ಲಿಲ್ಲ.

ಸಂಪತ್ ತಂದೆ 2004 ರಲ್ಲಿ ಸೋಮವಾರಪೇಟೆ ಪಂಚಾಯತ್ ಗೆ ಬಿಜೆಪಿಯಿಂದ ನಾಮನಿದೇ೯ಶಿತ ಸದಸ್ಯರಾಗಿದ್ದರು. ಸಂಪತ್ ಹಿನ್ನಲೆಯಲ್ಲಿ ಬಿಜೆಪಿ ಇತಿಹಾಸವಿದೆ. ಸಂಪತ್ ಯಾರಿಂದ ಕಾಮಗಾರಿ ಗುತ್ತಿಗೆ ಪಡೆಯುತ್ತಿದ್ದಾನೆ ಎಂಬುದು ಸೋಮವಾರಪೇಟೆ ಜನರಿಗೆ ತಿಳಿದಿದೆ.

ಕಾಂಗ್ರೆಸ್ ಅಧಿಕಾರಕ್ಕೇರುವ ತವಕದಲ್ಲಿ ಬಿಜೆಪಿಯಿಂದ ಇಂಥ ಷಡ್ಯಂತ್ರ ಎಂದು ಜೀವಿಜಯ ಆರೋಪ ಆರೋಪ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು