1:35 PM Tuesday5 - May 2026
ಬ್ರೇಕಿಂಗ್ ನ್ಯೂಸ್
ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ…

ಇತ್ತೀಚಿನ ಸುದ್ದಿ

ಮಡಿಕೇರಿ ಚಲೋಗೆ ಮಹತ್ವ ಬೇಡ; ಇದು ಜನಹಿತ ಪಾದಯಾತ್ರೆಯಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

23/08/2022, 11:16

ಹಾಸನ (reporterkarnataka.com): ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಆ.26 ರಂದು ಕಾಂಗ್ರೆಸ್‌ ಹಮ್ಮಿಕೊಂಡಿರುವ ಮಡಿಕೇರಿ ಚಲೋ ಮತ್ತು ಎಸ್ಪಿ ಕಚೇರಿ ಮುತ್ತಿಗೆ ಕಾರ್ಯಕ್ರಮಕ್ಕೆ ನಾನೇನು ಮಹತ್ವ ಕೊಡುವುದಿಲ್ಲ, ಜನವೂ ಮಹತ್ವ ಕೊಡದೆ ಇರುವುದೇ ಒಳಿತು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಅದೇನು ಜನಗಳ ಪರವಾಗಿ, ಜನತೆಯ ಹಿತಕ್ಕಾಗಿ ಮಾಡುತ್ತಿರುವ ಪಾದಯಾತ್ರೆಯೇನಲ್ಲ. ಅದಕ್ಕೆ ಜನ ಯಾವುದೇ ರೀತಿಯ ಪ್ರೋತ್ಸಾಹ ಕೊಡದಿರುವುದು ಒಳಿತು. ವಿರೋಧ ಪಕ್ಷದ ನಾಯಕರ ಮೇಲೆ ಮೊಟ್ಟೆಎಸೆದರು ಅಂತ ಅದಕ್ಕೊಂದು ಪಾದಯಾತ್ರೆ, ಅದರ ವಿರುದ್ಧವಾಗಿ ಇನ್ನೊಂದು ಪಾದಯಾತ್ರೆ. ಎರಡು ರಾಷ್ಟ್ರೀಯ ಪಕ್ಷಗಳ ಬೇಜವಾಬ್ದಾರಿ ನಡವಳಿಕೆ ರಾಜ್ಯದ ಜನತೆಯ ಸಮಸ್ಯೆಗೆ ಪೂರಕವಾದುದಲ್ಲ. ಎರಡೂ ಪಕ್ಷಗಳಿಗೆ ಭಗವಂತನೇ ಬುದ್ಧಿಕೊಡಬೇಕೆಂಬುದು ನನ್ನ ಅಭಿಪ್ರಾಯ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು