1:40 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಮಡಿಕೇರಿ ಚಲೋಗೆ ಮಹತ್ವ ಬೇಡ; ಇದು ಜನಹಿತ ಪಾದಯಾತ್ರೆಯಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

23/08/2022, 11:16

ಹಾಸನ (reporterkarnataka.com): ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಆ.26 ರಂದು ಕಾಂಗ್ರೆಸ್‌ ಹಮ್ಮಿಕೊಂಡಿರುವ ಮಡಿಕೇರಿ ಚಲೋ ಮತ್ತು ಎಸ್ಪಿ ಕಚೇರಿ ಮುತ್ತಿಗೆ ಕಾರ್ಯಕ್ರಮಕ್ಕೆ ನಾನೇನು ಮಹತ್ವ ಕೊಡುವುದಿಲ್ಲ, ಜನವೂ ಮಹತ್ವ ಕೊಡದೆ ಇರುವುದೇ ಒಳಿತು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಅದೇನು ಜನಗಳ ಪರವಾಗಿ, ಜನತೆಯ ಹಿತಕ್ಕಾಗಿ ಮಾಡುತ್ತಿರುವ ಪಾದಯಾತ್ರೆಯೇನಲ್ಲ. ಅದಕ್ಕೆ ಜನ ಯಾವುದೇ ರೀತಿಯ ಪ್ರೋತ್ಸಾಹ ಕೊಡದಿರುವುದು ಒಳಿತು. ವಿರೋಧ ಪಕ್ಷದ ನಾಯಕರ ಮೇಲೆ ಮೊಟ್ಟೆಎಸೆದರು ಅಂತ ಅದಕ್ಕೊಂದು ಪಾದಯಾತ್ರೆ, ಅದರ ವಿರುದ್ಧವಾಗಿ ಇನ್ನೊಂದು ಪಾದಯಾತ್ರೆ. ಎರಡು ರಾಷ್ಟ್ರೀಯ ಪಕ್ಷಗಳ ಬೇಜವಾಬ್ದಾರಿ ನಡವಳಿಕೆ ರಾಜ್ಯದ ಜನತೆಯ ಸಮಸ್ಯೆಗೆ ಪೂರಕವಾದುದಲ್ಲ. ಎರಡೂ ಪಕ್ಷಗಳಿಗೆ ಭಗವಂತನೇ ಬುದ್ಧಿಕೊಡಬೇಕೆಂಬುದು ನನ್ನ ಅಭಿಪ್ರಾಯ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು