2:52 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಲೈಂಗಿಕ ಕಿರುಕುಳ ಪ್ರಕರಣ: ಲೇಖಕ ಚಂದ್ರನ್  ನಿರೀಕ್ಷಣಾ ಜಾಮೀನು ರದ್ದು ಕೋರಿ ಕೇರಳ ಸರಕಾರ ಹೈಕೋರ್ಟ್ ಗೆ ಮೊರೆ 

23/08/2022, 19:55

ತಿರುವನಂತಪುರ(reporterkarnataka.com): ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಲೇಖಕ ಸಿವಿಕ್ ಚಂದ್ರನ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಕೋಝಿಕ್ಕೋಡ್ ಸೆಷನ್ಸ್ ನ್ಯಾಯಾಲಯದ 

ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಕೇರಳ ಸರಕಾರ ಸೋಮವಾರ ಹೈಕೋರ್ಟ್‌ಗೆ ಮೊರೆ ಹೋಗಿದೆ.

ಚಂದ್ರನ್‌ಗೆ ಜಾಮೀನು ನೀಡುವಾಗ, ಕೋಝಿಕ್ಕೋಡ್ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಎಸ್. ಕೃಷ್ಣ ಕುಮಾರ್ ಅವರು, ಮಹಿಳೆ  ‘ಪ್ರಚೋದನಕಾರಿ ಉಡುಗೆ’ ಧರಿಸಿದ್ದರೆ ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ಕಾನೂನು ಅನ್ವಯಿಸುವುದಿಲ್ಲ ಎಂದು ಹೇಳಿದ್ದರು.

ಈ ಆದೇಶವು ಆಕ್ರೋಶವನ್ನು ಹುಟ್ಟುಹಾಕಿದ್ದು, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು “ನ್ಯಾಯಾಲಯವು ಅಂತಹ ಹೇಳಿಕೆಗಳ ದೂರಗಾಮಿ ಪರಿಣಾಮಗಳನ್ನು ಕಡೆಗಣಿಸಿದೆ” ಎಂದು ಹೇಳಿದ್ದರು.

ಈ ಆದೇಶವು ಕಾನೂನುಬಾಹಿರ, ಅನ್ಯಾಯ ಮತ್ತು ದೂರುದಾರರಿಗೆ ಆಘಾತ ಉಂಟುಮಾಡಬಹುದು ಎಂದು ರಾಜ್ಯ ಸರಕಾರ ತನ್ನ ಮನವಿಯಲ್ಲಿ ಸಲ್ಲಿಸಿದೆ.

ಸೆಷನ್ಸ್ ನ್ಯಾಯಾಲಯದ ಅಂಶಗಳು ಹಾಗೂ ಅವಲೋಕನಗಳು ಅತ್ಯಂತ ಶೋಚನೀಯ, ಅವಮಾನಕರ. ಮಹಿಳಾ ವಿರೋಧಿ ಮತ್ತು ಇದು ಅಂತಿಮವಾಗಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಸಾರ್ವಜನಿಕ ನಂಬಿಕೆಗೆ ಹಾನಿ ಮಾಡುತ್ತದೆ ಎಂದು ಅರ್ಜಿಯಲ್ಲಿ ಸೇರಿಸಲಾಗಿದೆ ಎಂದು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು