12:35 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಲೈಂಗಿಕ ಕಿರುಕುಳ ಪ್ರಕರಣ: ಲೇಖಕ ಚಂದ್ರನ್  ನಿರೀಕ್ಷಣಾ ಜಾಮೀನು ರದ್ದು ಕೋರಿ ಕೇರಳ ಸರಕಾರ ಹೈಕೋರ್ಟ್ ಗೆ ಮೊರೆ 

23/08/2022, 19:55

ತಿರುವನಂತಪುರ(reporterkarnataka.com): ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಲೇಖಕ ಸಿವಿಕ್ ಚಂದ್ರನ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಕೋಝಿಕ್ಕೋಡ್ ಸೆಷನ್ಸ್ ನ್ಯಾಯಾಲಯದ 

ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಕೇರಳ ಸರಕಾರ ಸೋಮವಾರ ಹೈಕೋರ್ಟ್‌ಗೆ ಮೊರೆ ಹೋಗಿದೆ.

ಚಂದ್ರನ್‌ಗೆ ಜಾಮೀನು ನೀಡುವಾಗ, ಕೋಝಿಕ್ಕೋಡ್ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಎಸ್. ಕೃಷ್ಣ ಕುಮಾರ್ ಅವರು, ಮಹಿಳೆ  ‘ಪ್ರಚೋದನಕಾರಿ ಉಡುಗೆ’ ಧರಿಸಿದ್ದರೆ ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ಕಾನೂನು ಅನ್ವಯಿಸುವುದಿಲ್ಲ ಎಂದು ಹೇಳಿದ್ದರು.

ಈ ಆದೇಶವು ಆಕ್ರೋಶವನ್ನು ಹುಟ್ಟುಹಾಕಿದ್ದು, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು “ನ್ಯಾಯಾಲಯವು ಅಂತಹ ಹೇಳಿಕೆಗಳ ದೂರಗಾಮಿ ಪರಿಣಾಮಗಳನ್ನು ಕಡೆಗಣಿಸಿದೆ” ಎಂದು ಹೇಳಿದ್ದರು.

ಈ ಆದೇಶವು ಕಾನೂನುಬಾಹಿರ, ಅನ್ಯಾಯ ಮತ್ತು ದೂರುದಾರರಿಗೆ ಆಘಾತ ಉಂಟುಮಾಡಬಹುದು ಎಂದು ರಾಜ್ಯ ಸರಕಾರ ತನ್ನ ಮನವಿಯಲ್ಲಿ ಸಲ್ಲಿಸಿದೆ.

ಸೆಷನ್ಸ್ ನ್ಯಾಯಾಲಯದ ಅಂಶಗಳು ಹಾಗೂ ಅವಲೋಕನಗಳು ಅತ್ಯಂತ ಶೋಚನೀಯ, ಅವಮಾನಕರ. ಮಹಿಳಾ ವಿರೋಧಿ ಮತ್ತು ಇದು ಅಂತಿಮವಾಗಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಸಾರ್ವಜನಿಕ ನಂಬಿಕೆಗೆ ಹಾನಿ ಮಾಡುತ್ತದೆ ಎಂದು ಅರ್ಜಿಯಲ್ಲಿ ಸೇರಿಸಲಾಗಿದೆ ಎಂದು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು