9:01 AM Tuesday23 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ಹೀಗೊಂದು ಹಾವಿನ ದ್ವೇಷ: 25 ವರ್ಷಗಳಲ್ಲಿ ಒಂದೇ ಕುಟುಂಬದ 11 ಮಂದಿಗೆ ಕಚ್ಚಿದ ವಿಷ ಸರ್ಪ; 5 ಮಂದಿ ಸಾವು

24/08/2022, 13:41

ತುಮಕೂರು(reporterkarnataka.com):  ಇದು ವಿಚಿತ್ರವಾದರೂ ಸತ್ಯ. ಕಳೆದ 25 ವರ್ಷಗಳಲ್ಲಿ ಒಂದೇ ಕುಟುಂಬದ 11 ಮಂದಿಗೆ ಹಾವು ಕಚ್ಚಿದ್ದು,ಇದರಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ. ಇದೆಲ್ಲ ನಡೆದಿರುವುದು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೊಗರಿ ಘಟ್ಟ ಗ್ರಾಮದಲ್ಲಿ. ಕುಟುಂಬಸ್ಥರು ಇದೀಗ ತಮ್ಮ ಹೊಲಗದ್ದೆಗೆ ಹೋಗಲು ಭಯ ಪಡುತ್ತಿದ್ದಾರೆ.

ಮೊನ್ನೆ ಮೊನ್ನೆ ಈ ಕುಟುಂಬದ ಗೋವಿಂದ ರಾಜು ಎಂಬುವರು ಹೊಲದಲ್ಲಿ ನೀರು ಹಾಯಿಸಲು ಹೋದಾಗ ಹಾವು ಕಚ್ಚಿ ಮೃತಪಟ್ಟಿದ್ದರು.

ಹೊಲದಲ್ಲಿ ಮೆಣಸಿನ ಗಿಡ ಬೆಳೆದಿದ್ದರೂ ಅದರ ಸಮೀಪ ಸುಳಿಯದಂತಾಗಿದೆ. ಇನ್ನೊಂದೆಡೆ, ಮಾನಸಿಕವಾಗಿ ಇಡೀ ಕುಟುಂಬವೇ ಜರ್ಜರಿತವಾಗಿದೆ. ಕೂಲಿ ಕಾರ್ಮಿಕರು ಸಹ ಇವರ ಹೊಲಗದ್ದೆಯಲ್ಲಿ ಕೆಲಸ ಮಾಡಲು ಮುಂದೆ ಬರುತ್ತಿಲ್ಲ. 

ನಿರಂತರವಾಗಿ ಹಾವಿನ ಆಕ್ರೋಶ ಒಳಗಾಗುತ್ತಿರುವ ಈ ಕುಟುಂಬ, ರಾಹು ಕೇತು ಪೂಜೆಯನ್ನು ಸಹ ಮಾಡಿದೆ.ಆದರೆ, ಯಾವುದೂ ಕೂಡ ಪ್ರಯೋಜನಕ್ಕೆ ಬಾರದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು