11:50 PM Friday3 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಹೀಗೊಂದು ಹಾವಿನ ದ್ವೇಷ: 25 ವರ್ಷಗಳಲ್ಲಿ ಒಂದೇ ಕುಟುಂಬದ 11 ಮಂದಿಗೆ ಕಚ್ಚಿದ ವಿಷ ಸರ್ಪ; 5 ಮಂದಿ ಸಾವು

24/08/2022, 13:41

ತುಮಕೂರು(reporterkarnataka.com):  ಇದು ವಿಚಿತ್ರವಾದರೂ ಸತ್ಯ. ಕಳೆದ 25 ವರ್ಷಗಳಲ್ಲಿ ಒಂದೇ ಕುಟುಂಬದ 11 ಮಂದಿಗೆ ಹಾವು ಕಚ್ಚಿದ್ದು,ಇದರಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ. ಇದೆಲ್ಲ ನಡೆದಿರುವುದು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೊಗರಿ ಘಟ್ಟ ಗ್ರಾಮದಲ್ಲಿ. ಕುಟುಂಬಸ್ಥರು ಇದೀಗ ತಮ್ಮ ಹೊಲಗದ್ದೆಗೆ ಹೋಗಲು ಭಯ ಪಡುತ್ತಿದ್ದಾರೆ.

ಮೊನ್ನೆ ಮೊನ್ನೆ ಈ ಕುಟುಂಬದ ಗೋವಿಂದ ರಾಜು ಎಂಬುವರು ಹೊಲದಲ್ಲಿ ನೀರು ಹಾಯಿಸಲು ಹೋದಾಗ ಹಾವು ಕಚ್ಚಿ ಮೃತಪಟ್ಟಿದ್ದರು.

ಹೊಲದಲ್ಲಿ ಮೆಣಸಿನ ಗಿಡ ಬೆಳೆದಿದ್ದರೂ ಅದರ ಸಮೀಪ ಸುಳಿಯದಂತಾಗಿದೆ. ಇನ್ನೊಂದೆಡೆ, ಮಾನಸಿಕವಾಗಿ ಇಡೀ ಕುಟುಂಬವೇ ಜರ್ಜರಿತವಾಗಿದೆ. ಕೂಲಿ ಕಾರ್ಮಿಕರು ಸಹ ಇವರ ಹೊಲಗದ್ದೆಯಲ್ಲಿ ಕೆಲಸ ಮಾಡಲು ಮುಂದೆ ಬರುತ್ತಿಲ್ಲ. 

ನಿರಂತರವಾಗಿ ಹಾವಿನ ಆಕ್ರೋಶ ಒಳಗಾಗುತ್ತಿರುವ ಈ ಕುಟುಂಬ, ರಾಹು ಕೇತು ಪೂಜೆಯನ್ನು ಸಹ ಮಾಡಿದೆ.ಆದರೆ, ಯಾವುದೂ ಕೂಡ ಪ್ರಯೋಜನಕ್ಕೆ ಬಾರದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು