11:52 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಮಾವಿನಲ್ಲಿ ಸಮಗ್ರ ಬೆಳೆ ನಿರ್ವಹಣೆ; ಹೊರಾಂಗಣಾ ತರಬೇತಿ ಕಾರ್ಯಕ್ರಮ 

24/08/2022, 20:15

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ರೋಗನಿರೋಧಕ ಶಕ್ತಿಯೊಂದಿಗೆ ಬೆಳೆಯು ಆರೋಗ್ಯಕರವಾಗಿ ಬೆಳೆದು ಅಧಿಕ ಇಳುವರಿ ನೀಡಬೇಕಾದರೆ ಬೆಳೆಗಳಿಗೆ ಸಕಾಲದಲ್ಲಿ ಸವರುವಿಕೆ ಮತ್ತು ಸಮತೋಲನ ಪೋಷಕಾಂಶಗಳನ್ನು ಒದಗಿಸುವುದು ಅವಶ್ಯ . ಆದರೆ ಕೆಲವೇ ರೈತರು ಲಘು ಪೋಷಕಾಂಶಗಳ ಮಹತ್ವವನ್ನರಿತು ಬಳಸುತ್ತಿದ್ದಾರೆ.

ಆದ್ದರಿಂದ ಗುಣಮಟ್ಟದ ಬೆಳೆ ಹಾಗೂ ಹೆಚ್ಚಿನ ಇಳುವರಿಗಾಗಿ ಸವರುವಿಕೆ ಮಾಡುವುದು ಅವಶ್ಯವಾಗಿದೆ ಮತ್ತು ಸಮಗ್ರ ಪೋಷಕಾಂಶಗಳ ನಿರ್ವಹಣೆಯ ಅಂಗವಾಗಿ ಮಾವು ಬೆಳೆಯ ಎಲೆಗಳಿಗೆ ಸಿಂಪಡಿಸಬಹುದಾದ ಮಾವು ಸ್ಪೆಷಲ್ ಅತ್ಯಂತ ಉಪಯುಕ್ತವಾಗಿದೆ . ಈ ನಿಟ್ಟಿನಲ್ಲಿ ವಿಸ್ತರಣ ಶಿಕ್ಷಣ ಘಟಕ ( ಕೋಲಾರ ) , ಕೃಷಿ ವಿಜ್ಞಾನ ಕೇಂದ್ರ ಚಿಂತಾಮಣಿ ರವರ ವತಿಯಿಂದ ಮಾವಿನಲ್ಲಿ ಸಮಗ್ರ ಬೆಳೆ ನಿರ್ವಹಣೆ ಕುರಿತು ಹೊರಾಂಗಣಾ ತರಬೇತಿ ಕಾರ್ಯಕ್ರಮವನ್ನು ಶ್ರೀನಿವಾಸಪುರ ತಾಲೂಕಿನ ಬೂರುಗಾನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು ತೋಟಗಾರಿಕೆ ವಿಜ್ಞಾನಿಗಳಾದ ಸಿಂಧು ಕೆ. ಅವರು ಮಾವಿನಲ್ಲಿ ವೈಜ್ಞಾನಿಕ ಬೇಸಾಯ ಕ್ರಮಗಳು . ಮಾವಿನ ಮರ ಸವರುವಿಕೆ ಹಾಗೂ ಲಘುಪೋಷಕಾಂಶಗಳ ಮಿಶ್ರಣವಾದ ಮಾವು ಸ್ಪೆಷಲ್ ಕುರಿತು ಮಾಹಿತಿ ನೀಡಿದರು . ಡಾ.ದೀಲಿಪ್.ಎಸ್ .ವಿಜ್ಞಾನಿಗಳು ( ಕೃಷಿ ವಿಸ್ತರಣಾ ) ರವರು ಮಾವಿನಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಅರಿವು ಮೂಡಿಸಿದರು ಮತ್ತು ಮಾವಿನಲ್ಲಿ ಸವರುವಿಕೆ ಬಗ್ಗೆ ಮಾಹಿತಿ ನೀಡಿ ಪ್ರಾತ್ಯಕ್ಷಿಕೆ ಮುಖಾಂತರ ತೋರಿಸಿಕೊಟ್ಟರು . ಈ ಕಾರ್ಯಕ್ರಮದಲ್ಲಿ 25 ಜನ ರೈತರು ಪಾಲ್ಗೊಂಡಿದ್ದರು . ಮಾವಿನಲ್ಲಿ ರೆಂಬೆಗಳು ಒತ್ತೊತ್ತಾಗಿ ಬೆಳೆದಾಗ ಅವುಗಳಲ್ಲಿ ಕೆಲವೊಂದು ರೆಂಬೆಗಳನ್ನು ಕತ್ತರಿಸಿ ವಿರಳಗೊಳಿಸಿದರೆ ಸೂರ್ಯನ ಬೆಳಕು ಒಳಭಾಗದಲ್ಲಿ ಬೀಳುವಂತಾಗಿ ಒಳಭಾಗದಲ್ಲೂ ಕಾಯಿಕಚ್ಚುತ್ತವೆ . ಇದರಿಂದ ಇಳುವರಿ ಹಾಗೂ ಹಣ್ಣಿನ ಗುಣಮಟ್ಟ ಹೆಚ್ಚಾಗುತ್ತವೆ . ಗಿಡಗಳಿಗೆ 5-6 ವರ್ಷವಾದಾಗ ಮೊದಲ ವರ್ಷ ಮಧ್ಯದ ಒಂದೆರೆಡು ರೆಂಬೆಗಳನ್ನು ತೆಗೆದು ತೆರೆವು ಮಾಡಬೇಕು . ನಂತರದ ವರ್ಷಗಳಲ್ಲಿ ಇತರ ರೆಂಬೆಗಳನ್ನು ವಿರಳಗೊಳಿಸಲು ಕತ್ತರಿಸಬೇಕು . ಕತ್ತರಿಸಿದ ಭಾಗಗಳಿಗೆ ಶಿಲೀಂಧ್ರ ನಾಶಕ + ಕೀಟನಾಶಕದ ಮುಲಾಮನ್ನು ಲೇಪಿಸುವುದು ಅವಶ್ಯ . ಹಣ್ಣಿನ ಕೊಯ್ದು ಆದನಂತರ ಜುಲೈ- ಆಗಸ್ಟ್ ತಿಂಗಳುಗಳು ಕತ್ತರಿಸಲು ಸೂಕ್ತ ಸಮಯ .

ಇತ್ತೀಚಿನ ಸುದ್ದಿ

ಜಾಹೀರಾತು