4:01 AM Monday18 - May 2026
ಬ್ರೇಕಿಂಗ್ ನ್ಯೂಸ್
ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು.

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಮಾವಿನಲ್ಲಿ ಸಮಗ್ರ ಬೆಳೆ ನಿರ್ವಹಣೆ; ಹೊರಾಂಗಣಾ ತರಬೇತಿ ಕಾರ್ಯಕ್ರಮ 

24/08/2022, 20:15

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ರೋಗನಿರೋಧಕ ಶಕ್ತಿಯೊಂದಿಗೆ ಬೆಳೆಯು ಆರೋಗ್ಯಕರವಾಗಿ ಬೆಳೆದು ಅಧಿಕ ಇಳುವರಿ ನೀಡಬೇಕಾದರೆ ಬೆಳೆಗಳಿಗೆ ಸಕಾಲದಲ್ಲಿ ಸವರುವಿಕೆ ಮತ್ತು ಸಮತೋಲನ ಪೋಷಕಾಂಶಗಳನ್ನು ಒದಗಿಸುವುದು ಅವಶ್ಯ . ಆದರೆ ಕೆಲವೇ ರೈತರು ಲಘು ಪೋಷಕಾಂಶಗಳ ಮಹತ್ವವನ್ನರಿತು ಬಳಸುತ್ತಿದ್ದಾರೆ.

ಆದ್ದರಿಂದ ಗುಣಮಟ್ಟದ ಬೆಳೆ ಹಾಗೂ ಹೆಚ್ಚಿನ ಇಳುವರಿಗಾಗಿ ಸವರುವಿಕೆ ಮಾಡುವುದು ಅವಶ್ಯವಾಗಿದೆ ಮತ್ತು ಸಮಗ್ರ ಪೋಷಕಾಂಶಗಳ ನಿರ್ವಹಣೆಯ ಅಂಗವಾಗಿ ಮಾವು ಬೆಳೆಯ ಎಲೆಗಳಿಗೆ ಸಿಂಪಡಿಸಬಹುದಾದ ಮಾವು ಸ್ಪೆಷಲ್ ಅತ್ಯಂತ ಉಪಯುಕ್ತವಾಗಿದೆ . ಈ ನಿಟ್ಟಿನಲ್ಲಿ ವಿಸ್ತರಣ ಶಿಕ್ಷಣ ಘಟಕ ( ಕೋಲಾರ ) , ಕೃಷಿ ವಿಜ್ಞಾನ ಕೇಂದ್ರ ಚಿಂತಾಮಣಿ ರವರ ವತಿಯಿಂದ ಮಾವಿನಲ್ಲಿ ಸಮಗ್ರ ಬೆಳೆ ನಿರ್ವಹಣೆ ಕುರಿತು ಹೊರಾಂಗಣಾ ತರಬೇತಿ ಕಾರ್ಯಕ್ರಮವನ್ನು ಶ್ರೀನಿವಾಸಪುರ ತಾಲೂಕಿನ ಬೂರುಗಾನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು ತೋಟಗಾರಿಕೆ ವಿಜ್ಞಾನಿಗಳಾದ ಸಿಂಧು ಕೆ. ಅವರು ಮಾವಿನಲ್ಲಿ ವೈಜ್ಞಾನಿಕ ಬೇಸಾಯ ಕ್ರಮಗಳು . ಮಾವಿನ ಮರ ಸವರುವಿಕೆ ಹಾಗೂ ಲಘುಪೋಷಕಾಂಶಗಳ ಮಿಶ್ರಣವಾದ ಮಾವು ಸ್ಪೆಷಲ್ ಕುರಿತು ಮಾಹಿತಿ ನೀಡಿದರು . ಡಾ.ದೀಲಿಪ್.ಎಸ್ .ವಿಜ್ಞಾನಿಗಳು ( ಕೃಷಿ ವಿಸ್ತರಣಾ ) ರವರು ಮಾವಿನಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಅರಿವು ಮೂಡಿಸಿದರು ಮತ್ತು ಮಾವಿನಲ್ಲಿ ಸವರುವಿಕೆ ಬಗ್ಗೆ ಮಾಹಿತಿ ನೀಡಿ ಪ್ರಾತ್ಯಕ್ಷಿಕೆ ಮುಖಾಂತರ ತೋರಿಸಿಕೊಟ್ಟರು . ಈ ಕಾರ್ಯಕ್ರಮದಲ್ಲಿ 25 ಜನ ರೈತರು ಪಾಲ್ಗೊಂಡಿದ್ದರು . ಮಾವಿನಲ್ಲಿ ರೆಂಬೆಗಳು ಒತ್ತೊತ್ತಾಗಿ ಬೆಳೆದಾಗ ಅವುಗಳಲ್ಲಿ ಕೆಲವೊಂದು ರೆಂಬೆಗಳನ್ನು ಕತ್ತರಿಸಿ ವಿರಳಗೊಳಿಸಿದರೆ ಸೂರ್ಯನ ಬೆಳಕು ಒಳಭಾಗದಲ್ಲಿ ಬೀಳುವಂತಾಗಿ ಒಳಭಾಗದಲ್ಲೂ ಕಾಯಿಕಚ್ಚುತ್ತವೆ . ಇದರಿಂದ ಇಳುವರಿ ಹಾಗೂ ಹಣ್ಣಿನ ಗುಣಮಟ್ಟ ಹೆಚ್ಚಾಗುತ್ತವೆ . ಗಿಡಗಳಿಗೆ 5-6 ವರ್ಷವಾದಾಗ ಮೊದಲ ವರ್ಷ ಮಧ್ಯದ ಒಂದೆರೆಡು ರೆಂಬೆಗಳನ್ನು ತೆಗೆದು ತೆರೆವು ಮಾಡಬೇಕು . ನಂತರದ ವರ್ಷಗಳಲ್ಲಿ ಇತರ ರೆಂಬೆಗಳನ್ನು ವಿರಳಗೊಳಿಸಲು ಕತ್ತರಿಸಬೇಕು . ಕತ್ತರಿಸಿದ ಭಾಗಗಳಿಗೆ ಶಿಲೀಂಧ್ರ ನಾಶಕ + ಕೀಟನಾಶಕದ ಮುಲಾಮನ್ನು ಲೇಪಿಸುವುದು ಅವಶ್ಯ . ಹಣ್ಣಿನ ಕೊಯ್ದು ಆದನಂತರ ಜುಲೈ- ಆಗಸ್ಟ್ ತಿಂಗಳುಗಳು ಕತ್ತರಿಸಲು ಸೂಕ್ತ ಸಮಯ .

ಇತ್ತೀಚಿನ ಸುದ್ದಿ

ಜಾಹೀರಾತು