2:52 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಮಾವಿನಲ್ಲಿ ಸಮಗ್ರ ಬೆಳೆ ನಿರ್ವಹಣೆ; ಹೊರಾಂಗಣಾ ತರಬೇತಿ ಕಾರ್ಯಕ್ರಮ 

24/08/2022, 20:15

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ರೋಗನಿರೋಧಕ ಶಕ್ತಿಯೊಂದಿಗೆ ಬೆಳೆಯು ಆರೋಗ್ಯಕರವಾಗಿ ಬೆಳೆದು ಅಧಿಕ ಇಳುವರಿ ನೀಡಬೇಕಾದರೆ ಬೆಳೆಗಳಿಗೆ ಸಕಾಲದಲ್ಲಿ ಸವರುವಿಕೆ ಮತ್ತು ಸಮತೋಲನ ಪೋಷಕಾಂಶಗಳನ್ನು ಒದಗಿಸುವುದು ಅವಶ್ಯ . ಆದರೆ ಕೆಲವೇ ರೈತರು ಲಘು ಪೋಷಕಾಂಶಗಳ ಮಹತ್ವವನ್ನರಿತು ಬಳಸುತ್ತಿದ್ದಾರೆ.

ಆದ್ದರಿಂದ ಗುಣಮಟ್ಟದ ಬೆಳೆ ಹಾಗೂ ಹೆಚ್ಚಿನ ಇಳುವರಿಗಾಗಿ ಸವರುವಿಕೆ ಮಾಡುವುದು ಅವಶ್ಯವಾಗಿದೆ ಮತ್ತು ಸಮಗ್ರ ಪೋಷಕಾಂಶಗಳ ನಿರ್ವಹಣೆಯ ಅಂಗವಾಗಿ ಮಾವು ಬೆಳೆಯ ಎಲೆಗಳಿಗೆ ಸಿಂಪಡಿಸಬಹುದಾದ ಮಾವು ಸ್ಪೆಷಲ್ ಅತ್ಯಂತ ಉಪಯುಕ್ತವಾಗಿದೆ . ಈ ನಿಟ್ಟಿನಲ್ಲಿ ವಿಸ್ತರಣ ಶಿಕ್ಷಣ ಘಟಕ ( ಕೋಲಾರ ) , ಕೃಷಿ ವಿಜ್ಞಾನ ಕೇಂದ್ರ ಚಿಂತಾಮಣಿ ರವರ ವತಿಯಿಂದ ಮಾವಿನಲ್ಲಿ ಸಮಗ್ರ ಬೆಳೆ ನಿರ್ವಹಣೆ ಕುರಿತು ಹೊರಾಂಗಣಾ ತರಬೇತಿ ಕಾರ್ಯಕ್ರಮವನ್ನು ಶ್ರೀನಿವಾಸಪುರ ತಾಲೂಕಿನ ಬೂರುಗಾನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು ತೋಟಗಾರಿಕೆ ವಿಜ್ಞಾನಿಗಳಾದ ಸಿಂಧು ಕೆ. ಅವರು ಮಾವಿನಲ್ಲಿ ವೈಜ್ಞಾನಿಕ ಬೇಸಾಯ ಕ್ರಮಗಳು . ಮಾವಿನ ಮರ ಸವರುವಿಕೆ ಹಾಗೂ ಲಘುಪೋಷಕಾಂಶಗಳ ಮಿಶ್ರಣವಾದ ಮಾವು ಸ್ಪೆಷಲ್ ಕುರಿತು ಮಾಹಿತಿ ನೀಡಿದರು . ಡಾ.ದೀಲಿಪ್.ಎಸ್ .ವಿಜ್ಞಾನಿಗಳು ( ಕೃಷಿ ವಿಸ್ತರಣಾ ) ರವರು ಮಾವಿನಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಅರಿವು ಮೂಡಿಸಿದರು ಮತ್ತು ಮಾವಿನಲ್ಲಿ ಸವರುವಿಕೆ ಬಗ್ಗೆ ಮಾಹಿತಿ ನೀಡಿ ಪ್ರಾತ್ಯಕ್ಷಿಕೆ ಮುಖಾಂತರ ತೋರಿಸಿಕೊಟ್ಟರು . ಈ ಕಾರ್ಯಕ್ರಮದಲ್ಲಿ 25 ಜನ ರೈತರು ಪಾಲ್ಗೊಂಡಿದ್ದರು . ಮಾವಿನಲ್ಲಿ ರೆಂಬೆಗಳು ಒತ್ತೊತ್ತಾಗಿ ಬೆಳೆದಾಗ ಅವುಗಳಲ್ಲಿ ಕೆಲವೊಂದು ರೆಂಬೆಗಳನ್ನು ಕತ್ತರಿಸಿ ವಿರಳಗೊಳಿಸಿದರೆ ಸೂರ್ಯನ ಬೆಳಕು ಒಳಭಾಗದಲ್ಲಿ ಬೀಳುವಂತಾಗಿ ಒಳಭಾಗದಲ್ಲೂ ಕಾಯಿಕಚ್ಚುತ್ತವೆ . ಇದರಿಂದ ಇಳುವರಿ ಹಾಗೂ ಹಣ್ಣಿನ ಗುಣಮಟ್ಟ ಹೆಚ್ಚಾಗುತ್ತವೆ . ಗಿಡಗಳಿಗೆ 5-6 ವರ್ಷವಾದಾಗ ಮೊದಲ ವರ್ಷ ಮಧ್ಯದ ಒಂದೆರೆಡು ರೆಂಬೆಗಳನ್ನು ತೆಗೆದು ತೆರೆವು ಮಾಡಬೇಕು . ನಂತರದ ವರ್ಷಗಳಲ್ಲಿ ಇತರ ರೆಂಬೆಗಳನ್ನು ವಿರಳಗೊಳಿಸಲು ಕತ್ತರಿಸಬೇಕು . ಕತ್ತರಿಸಿದ ಭಾಗಗಳಿಗೆ ಶಿಲೀಂಧ್ರ ನಾಶಕ + ಕೀಟನಾಶಕದ ಮುಲಾಮನ್ನು ಲೇಪಿಸುವುದು ಅವಶ್ಯ . ಹಣ್ಣಿನ ಕೊಯ್ದು ಆದನಂತರ ಜುಲೈ- ಆಗಸ್ಟ್ ತಿಂಗಳುಗಳು ಕತ್ತರಿಸಲು ಸೂಕ್ತ ಸಮಯ .

ಇತ್ತೀಚಿನ ಸುದ್ದಿ

ಜಾಹೀರಾತು