2:07 AM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನೆಲೆ ನಿಲ್ಲಲಿದೆ 21 ಅಡಿಯ ಬೃಹತ್ ಪರ್ವತಾಂಜನೇಯ ಮೂರ್ತಿ: ತುಮಕೂರಿನಿಂದ ಶಿಲೆ ಆಗಮನ

25/08/2022, 14:33

ಸಂತೋಷ್ ಅತ್ತಿಕೆರೆ ಚಿಕ್ಕ ಮಂಗಳೂರು

info.reporterkarnataka@gmail.com

ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ 21 ಅಡಿಯ ಬೃಹತ್ ಪರ್ವತಾಂಜನೇಯ ಮೂರ್ತಿ ನಿರ್ಮಾಣಗೊಳ್ಳಲಿದೆ. ಪಶ್ಚಿಮಘಟ್ಟಗಳ ಸಾಲಿನಲ್ಲಿರುವ ಚಿಕ್ಕಮಗಳೂರು ತಾಲೂಕಿನ ದತ್ತಪೀಠ ಮಾರ್ಗದ ಕವಿಕಲ್‍ಗಂಡಿ ಎಂಬ ಸ್ಥಳದಲ್ಲಿರುವ ಆಂಜನೇಯನ ಗುಡಿ ಬಳಿ ಈ 21 ಅಡಿ ಎತ್ತರದ ಆಂಜನೇಯ ನೆಲೆ ನಿಲ್ಲಲಿದ್ದಾನೆ. ಈಗಾಗಲೇ ಮೂರ್ತಿ ಕೆತ್ತನೆ ಶಾಸಕ ಸಿ.ಟಿ.ರವಿ ನೇತೃತ್ವದಲ್ಲಿ ಸಿದ್ಧತೆ ನಡೆದಿದ್ದು, ತುಮಕೂರು ಜಿಲ್ಲೆ ಶಿರಾ ತಾಲೂಕಿನಿಂದ ಕೃಷ್ಣಶಿಲೆ ಕಲ್ಲುಗಳು ಕೂಡ ಚಿಕ್ಕಮಗಳೂರು ನಗರಕ್ಕೆ ಆಗಮಿಸಿವೆ. ನಗರದ ದ್ವಾರಬಾಗಿಲು ದಾಸರಹಳ್ಳಿ ಬಳಿ ಕಲ್ಲುಗಳಿಗೆ ಪೂಜೆ ಮಾಡಿ ಪುರಪ್ರವೇಶ ಮಾಡಿಕೊಳ್ಳಲಿದ್ದಾರೆ. ಕಲ್ಲಿನ ಜೊತೆ ಶಿಲ್ಪಿಗಳೂ ಕೂಡ ಆಗಮಿಸಿದ್ದಾರೆ.


ಮೂರ್ತಿಯನ್ನ ಪ್ರತಿಷ್ಠಾಪಿಸುವ ಜಾಗದಲ್ಲೇ ಕೆತ್ತನೇ ಮಾಡಬೇಕೋ ಅಥವ ಬೇರೇಡೆ ಕೆತ್ತನೆ ಮಾಡಿ ಅಲ್ಲಿಗೆ ಕೊಂಡೊಯ್ದು ಪ್ರತಿಷ್ಠಾಪಿಸಬೇಕೋ ಎಂಬ ಚರ್ಚೆಗಳು ನಡೆಯುತ್ತಿವೆ. ಈ ಮೂರ್ತಿ ಕವಿಕಲ್‍ಗಂಡಿ ಬಳಿ ನೆಲೆ ನಿಂತರೇ ಸುತ್ತಮುತ್ತಲಿನ ಸುಮಾರು 30 ಕಿ.ಮೀ. ದೂರಕ್ಕೂ ಈ ಮೂರ್ತಿ ಕಾಣುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈಗಾಗಲೇ ಸಾವಿರಾರು ಭಕ್ತರು ದತ್ತಪೀಠಕ್ಕೆ ಬಂದು ಪ್ರಕೃತಿ ಮಧ್ಯೆ ನೆಲೆಸಿರುವ ದತ್ತಾತ್ತೇಯರ ದರ್ಶನ ಮಾಡುತ್ತಿದ್ದಾರೆ. ಈ ಮೂರ್ತಿ ನೆಲೆ ನಿಂತರೇ ಕಾಫಿನಾಡು ದೇಶದ ಅತ್ಯಂತ ಹೆಸರಾಂತ ಪ್ರವಾಸಿ ತಾಣವಾಗೋದ್ರಲ್ಲಿ ಯಾವುದೇ ಅನುಮಾನವಿಲ್ಲ. ದೇಶಾದ್ಯಂತ ಇರೋ ಲಕ್ಷಾಂತರ ಆಂಜನೇಯ ಭಕ್ತರು ಕಾಫಿನಾಡ ಪ್ರಕೃತಿ ಸೌಂದರ್ಯದ ಆಂಜನೇಯ ದರ್ಶನವನ್ನೂ ಪಡೆಯಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು