4:29 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಅಪಘಾತದಲ್ಲಿ ಕೈ ಕಳೆದುಕೊಂಡ ಬಾಳೆಪುಣಿ ಗ್ರಾಪಂ ಸದಸ್ಯೆಗೆ ಎಚ್ ಎಂಎಸ್ ನಿಂದ ಚಿಕಿತ್ಸೆಗೆ ನೆರವು

25/08/2022, 18:33

ಮಂಗಳೂರು(reporterkarnataka.com): ಇತ್ತೀಚೆಗೆ ವಾಹನಾಪಘಾತಕ್ಕೀಡಾಗಿ ತನ್ನ ಎಡ ಕೈಯನ್ನು ಕಳೆದುಕೊಂಡು ನಗರದ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಳೆಪುಣಿ ಗ್ರಾಮ ಪಂಚಾಯತ್ ಸದಸ್ಯೆ ಹಾಗೂ ಗಣೇಶ್ ಬೀಡಿ ಕಾರ್ಮಿಕೆಯಾಗಿರುವ ಸೆಮೀಮ ಅವರಿಗೆ ಎಚ್.ಎಂ.ಎಸ್ ಯೂನಿಯನ್ ವತಿಯಿಂದ 30 ಸಾವಿರ ಆರ್ಥಿಕ ನೆರವು ನೀಡಲಾಯಿತು.

ಮಂಗಳೂರಿನ ಚಿತ್ತಾರ ಬಳಗದ ಮನವಿಗೆ ಸ್ಪಂದಿಸಿದ ಕರ್ನಾಟಕ ಕರಾವಳಿ ಬೀಡಿ ವರ್ಕರ್ಸ್ ಮತ್ತು  ಸೌತ್ ಕೆನರಾ ಮತ್ತು ಉಡುಪಿ ಬೀಡಿ ಕಂಟ್ರಾಕ್ಟರ್ಸ್ ಯೂನಿಯನ್ ಪದಾಧಿಕಾರಿಗಳು ಆಸ್ಪತ್ರೆಗೆ ಬಂದು ಸೆಮೀಮ ಅವರಿಗೆ ನೆರವಿನ ಮೊತ್ತದ ಚೆಕ್ ಹಸ್ತಾಂತರಿಸಿದರು. 

ಯೂನಿಯನ್ ರಾಜ್ಯ ಘಟಕದ ಅಧ್ಯಕ್ಷ ಎಂ.ಸುರೇಶ್ಚಂದ್ರ ಶೆಟ್ಟಿ, ಜಿಲ್ಲಾಧ್ಯಕ್ಷ ಮಹಮ್ಮದ್ ರಫಿ, ಕಂಟ್ರಾಕ್ಟರ್ಸ್ ಯೂನಿಯನ್ ಅಧ್ಯಕ್ಷ ಹರೀಶ್ ಕೆ.ಎಸ್. ಕೋಶಾಧಿಕಾರಿ ಇಸ್ಮಾಯಿಲ್ ಡಿ.ಎಸ್. , ಸದಸ್ಯ ಸಿದ್ದಿಕ್ ಅರ್ಕಾನ,  ಹಾಗೂ ಮುಡಿಪು ಜನಶಿಕ್ಷಣ ಟ್ರಸ್ಟ್ ನ ನಿರ್ದೇಶಕರಾದ ಶೀನ ಶೆಟ್ಟಿ ಮತ್ತು ಕ್ರಷ್ಣಮೂಲ್ಯ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು