8:33 PM Saturday31 - January 2026
ಬ್ರೇಕಿಂಗ್ ನ್ಯೂಸ್
ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ

ಇತ್ತೀಚಿನ ಸುದ್ದಿ

ಅಪಘಾತದಲ್ಲಿ ಕೈ ಕಳೆದುಕೊಂಡ ಬಾಳೆಪುಣಿ ಗ್ರಾಪಂ ಸದಸ್ಯೆಗೆ ಎಚ್ ಎಂಎಸ್ ನಿಂದ ಚಿಕಿತ್ಸೆಗೆ ನೆರವು

25/08/2022, 18:33

ಮಂಗಳೂರು(reporterkarnataka.com): ಇತ್ತೀಚೆಗೆ ವಾಹನಾಪಘಾತಕ್ಕೀಡಾಗಿ ತನ್ನ ಎಡ ಕೈಯನ್ನು ಕಳೆದುಕೊಂಡು ನಗರದ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಳೆಪುಣಿ ಗ್ರಾಮ ಪಂಚಾಯತ್ ಸದಸ್ಯೆ ಹಾಗೂ ಗಣೇಶ್ ಬೀಡಿ ಕಾರ್ಮಿಕೆಯಾಗಿರುವ ಸೆಮೀಮ ಅವರಿಗೆ ಎಚ್.ಎಂ.ಎಸ್ ಯೂನಿಯನ್ ವತಿಯಿಂದ 30 ಸಾವಿರ ಆರ್ಥಿಕ ನೆರವು ನೀಡಲಾಯಿತು.

ಮಂಗಳೂರಿನ ಚಿತ್ತಾರ ಬಳಗದ ಮನವಿಗೆ ಸ್ಪಂದಿಸಿದ ಕರ್ನಾಟಕ ಕರಾವಳಿ ಬೀಡಿ ವರ್ಕರ್ಸ್ ಮತ್ತು  ಸೌತ್ ಕೆನರಾ ಮತ್ತು ಉಡುಪಿ ಬೀಡಿ ಕಂಟ್ರಾಕ್ಟರ್ಸ್ ಯೂನಿಯನ್ ಪದಾಧಿಕಾರಿಗಳು ಆಸ್ಪತ್ರೆಗೆ ಬಂದು ಸೆಮೀಮ ಅವರಿಗೆ ನೆರವಿನ ಮೊತ್ತದ ಚೆಕ್ ಹಸ್ತಾಂತರಿಸಿದರು. 

ಯೂನಿಯನ್ ರಾಜ್ಯ ಘಟಕದ ಅಧ್ಯಕ್ಷ ಎಂ.ಸುರೇಶ್ಚಂದ್ರ ಶೆಟ್ಟಿ, ಜಿಲ್ಲಾಧ್ಯಕ್ಷ ಮಹಮ್ಮದ್ ರಫಿ, ಕಂಟ್ರಾಕ್ಟರ್ಸ್ ಯೂನಿಯನ್ ಅಧ್ಯಕ್ಷ ಹರೀಶ್ ಕೆ.ಎಸ್. ಕೋಶಾಧಿಕಾರಿ ಇಸ್ಮಾಯಿಲ್ ಡಿ.ಎಸ್. , ಸದಸ್ಯ ಸಿದ್ದಿಕ್ ಅರ್ಕಾನ,  ಹಾಗೂ ಮುಡಿಪು ಜನಶಿಕ್ಷಣ ಟ್ರಸ್ಟ್ ನ ನಿರ್ದೇಶಕರಾದ ಶೀನ ಶೆಟ್ಟಿ ಮತ್ತು ಕ್ರಷ್ಣಮೂಲ್ಯ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು