8:42 PM Monday14 - July 2025
ಬ್ರೇಕಿಂಗ್ ನ್ಯೂಸ್
ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು

ಇತ್ತೀಚಿನ ಸುದ್ದಿ

ಅಪಘಾತದಲ್ಲಿ ಕೈ ಕಳೆದುಕೊಂಡ ಬಾಳೆಪುಣಿ ಗ್ರಾಪಂ ಸದಸ್ಯೆಗೆ ಎಚ್ ಎಂಎಸ್ ನಿಂದ ಚಿಕಿತ್ಸೆಗೆ ನೆರವು

25/08/2022, 18:33

ಮಂಗಳೂರು(reporterkarnataka.com): ಇತ್ತೀಚೆಗೆ ವಾಹನಾಪಘಾತಕ್ಕೀಡಾಗಿ ತನ್ನ ಎಡ ಕೈಯನ್ನು ಕಳೆದುಕೊಂಡು ನಗರದ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಳೆಪುಣಿ ಗ್ರಾಮ ಪಂಚಾಯತ್ ಸದಸ್ಯೆ ಹಾಗೂ ಗಣೇಶ್ ಬೀಡಿ ಕಾರ್ಮಿಕೆಯಾಗಿರುವ ಸೆಮೀಮ ಅವರಿಗೆ ಎಚ್.ಎಂ.ಎಸ್ ಯೂನಿಯನ್ ವತಿಯಿಂದ 30 ಸಾವಿರ ಆರ್ಥಿಕ ನೆರವು ನೀಡಲಾಯಿತು.

ಮಂಗಳೂರಿನ ಚಿತ್ತಾರ ಬಳಗದ ಮನವಿಗೆ ಸ್ಪಂದಿಸಿದ ಕರ್ನಾಟಕ ಕರಾವಳಿ ಬೀಡಿ ವರ್ಕರ್ಸ್ ಮತ್ತು  ಸೌತ್ ಕೆನರಾ ಮತ್ತು ಉಡುಪಿ ಬೀಡಿ ಕಂಟ್ರಾಕ್ಟರ್ಸ್ ಯೂನಿಯನ್ ಪದಾಧಿಕಾರಿಗಳು ಆಸ್ಪತ್ರೆಗೆ ಬಂದು ಸೆಮೀಮ ಅವರಿಗೆ ನೆರವಿನ ಮೊತ್ತದ ಚೆಕ್ ಹಸ್ತಾಂತರಿಸಿದರು. 

ಯೂನಿಯನ್ ರಾಜ್ಯ ಘಟಕದ ಅಧ್ಯಕ್ಷ ಎಂ.ಸುರೇಶ್ಚಂದ್ರ ಶೆಟ್ಟಿ, ಜಿಲ್ಲಾಧ್ಯಕ್ಷ ಮಹಮ್ಮದ್ ರಫಿ, ಕಂಟ್ರಾಕ್ಟರ್ಸ್ ಯೂನಿಯನ್ ಅಧ್ಯಕ್ಷ ಹರೀಶ್ ಕೆ.ಎಸ್. ಕೋಶಾಧಿಕಾರಿ ಇಸ್ಮಾಯಿಲ್ ಡಿ.ಎಸ್. , ಸದಸ್ಯ ಸಿದ್ದಿಕ್ ಅರ್ಕಾನ,  ಹಾಗೂ ಮುಡಿಪು ಜನಶಿಕ್ಷಣ ಟ್ರಸ್ಟ್ ನ ನಿರ್ದೇಶಕರಾದ ಶೀನ ಶೆಟ್ಟಿ ಮತ್ತು ಕ್ರಷ್ಣಮೂಲ್ಯ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು