12:30 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಅಪಘಾತದಲ್ಲಿ ಕೈ ಕಳೆದುಕೊಂಡ ಬಾಳೆಪುಣಿ ಗ್ರಾಪಂ ಸದಸ್ಯೆಗೆ ಎಚ್ ಎಂಎಸ್ ನಿಂದ ಚಿಕಿತ್ಸೆಗೆ ನೆರವು

25/08/2022, 18:33

ಮಂಗಳೂರು(reporterkarnataka.com): ಇತ್ತೀಚೆಗೆ ವಾಹನಾಪಘಾತಕ್ಕೀಡಾಗಿ ತನ್ನ ಎಡ ಕೈಯನ್ನು ಕಳೆದುಕೊಂಡು ನಗರದ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಳೆಪುಣಿ ಗ್ರಾಮ ಪಂಚಾಯತ್ ಸದಸ್ಯೆ ಹಾಗೂ ಗಣೇಶ್ ಬೀಡಿ ಕಾರ್ಮಿಕೆಯಾಗಿರುವ ಸೆಮೀಮ ಅವರಿಗೆ ಎಚ್.ಎಂ.ಎಸ್ ಯೂನಿಯನ್ ವತಿಯಿಂದ 30 ಸಾವಿರ ಆರ್ಥಿಕ ನೆರವು ನೀಡಲಾಯಿತು.

ಮಂಗಳೂರಿನ ಚಿತ್ತಾರ ಬಳಗದ ಮನವಿಗೆ ಸ್ಪಂದಿಸಿದ ಕರ್ನಾಟಕ ಕರಾವಳಿ ಬೀಡಿ ವರ್ಕರ್ಸ್ ಮತ್ತು  ಸೌತ್ ಕೆನರಾ ಮತ್ತು ಉಡುಪಿ ಬೀಡಿ ಕಂಟ್ರಾಕ್ಟರ್ಸ್ ಯೂನಿಯನ್ ಪದಾಧಿಕಾರಿಗಳು ಆಸ್ಪತ್ರೆಗೆ ಬಂದು ಸೆಮೀಮ ಅವರಿಗೆ ನೆರವಿನ ಮೊತ್ತದ ಚೆಕ್ ಹಸ್ತಾಂತರಿಸಿದರು. 

ಯೂನಿಯನ್ ರಾಜ್ಯ ಘಟಕದ ಅಧ್ಯಕ್ಷ ಎಂ.ಸುರೇಶ್ಚಂದ್ರ ಶೆಟ್ಟಿ, ಜಿಲ್ಲಾಧ್ಯಕ್ಷ ಮಹಮ್ಮದ್ ರಫಿ, ಕಂಟ್ರಾಕ್ಟರ್ಸ್ ಯೂನಿಯನ್ ಅಧ್ಯಕ್ಷ ಹರೀಶ್ ಕೆ.ಎಸ್. ಕೋಶಾಧಿಕಾರಿ ಇಸ್ಮಾಯಿಲ್ ಡಿ.ಎಸ್. , ಸದಸ್ಯ ಸಿದ್ದಿಕ್ ಅರ್ಕಾನ,  ಹಾಗೂ ಮುಡಿಪು ಜನಶಿಕ್ಷಣ ಟ್ರಸ್ಟ್ ನ ನಿರ್ದೇಶಕರಾದ ಶೀನ ಶೆಟ್ಟಿ ಮತ್ತು ಕ್ರಷ್ಣಮೂಲ್ಯ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು