10:31 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಾಸರಗೋಡು: ದುಷ್ಕರ್ಮಿಗಳಿಂದ ರೈಲು ಹಳಿ ತಪ್ಪಿಸಲು ಯತ್ನ; ಹಾಗಾದರೆ ವಿಧ್ವಂಸಕ ಕೃತ್ಯಕ್ಕೆ ನಡೆದಿತ್ತೇ ಸಂಚು?

26/08/2022, 12:25

ಮಂಗಳೂರು(reporterkarnataka.com): ನೆರೆಯ ಕೇರಳದ ಕಾಸರಗೋಡಿನ ಬಳಿ ರೈಲ್ವೆ ಹಳಿಗಳ ಮೇಲೆ ಕಾಂಕ್ರೀಟ್ ತುಂಡು ಇಟ್ಟು ರೈಲನ್ನು ಹಳಿಗಳನ್ನು ತಪ್ಪಿಸಲು ಕಿಡಿಗೇಡಿಗಳು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಇದರೊಂದಿಗೆ ಕರಾವಳಿಯಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ನಡೆದಿತ್ತೇ ಎಂಬ ಅನುಮಾನ ಕಾಡಲಾರಂಭಿಸಿದೆ.

ಕಾಸರಗೋಡಿನ ಕೋಟಿಕುಳಂ ಮತ್ತು ಬೇಕಲ ಮಧ್ಯೆ ರೈಲ್ವೆ ಹಳಿಗಳ ಮೇಲೆ ಕಿಡಿಗೇಡಿಗಳು ಆಗಸ್ಟ್ 21ರಂದು ಕಬ್ಬಿಣ್ಣದ ಸರಳುಗಳು, ಕಾಂಕ್ರೀಟ್ ಇಟ್ಟು ರೈಲಿನ ಹಳಿ ತಪ್ಪಿಸಲು ಯತ್ನಿಸಿರುವ ಘಟನೆ ನಡೆದಿದೆ. ರೈಲ್ವೆ ಗಾರ್ಡ್ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ಹಳಿ ಮೇಲೆ 35 ಕೆಜಿ ಕಾಂಕ್ರೀಟ್ ತುಂಡು ಪತ್ತೆಯಾಗಿದೆ.

ರೈಲ್ವೆ ಪೊಲೀಸರು ಮತ್ತು ಸ್ಥಳೀಯ ಪೊಲೀಸರು ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದಾರೆ. ಕಳೆದ ಶನಿವಾರವೂ ಇಂತಹುದೇ ಕೃತ್ಯ ನಡೆದಿದ್ದು, ಚಿತ್ತಾರಿ ಎಂಬಲ್ಲಿ ಕೊಯಂಬತ್ತೂರು ಮಂಗಳೂರು ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲೆಸೆದು ಪರಾರಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು