9:45 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

ಪರಿಸರ ಮತ್ತು ನೀರಿನ ಶುಚಿತ್ವ ಕಾಪಾಡುವ ಮೂಲಕ ಮಲೇರಿಯಾ ಪಿಡುಗು ನಿವಾರಣೆ ಸಾಧ್ಯ

25/06/2021, 08:03

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾವಿರುವ ಸುತ್ತಮುತ್ತಲಿನ ಪರಿಸರ ಹಾಗೂ ನೀರಿನ ಶುಚಿತ್ವ ಕಾಪಾಡಿಕೊಳ್ಳುವ ಮುಖಾಂತರ ಮಲೇರಿಯಾ ರೋಗದ ಪಿಡುಗನ್ನು ತೊಲಗಿಸಲು ಮುಂಜಾಗೃತ ಕ್ರಮ ವಹಿಸುವಂತೆ ಮಲೇರಿಯಾ ಜಿಲ್ಲಾ ನಿರ್ಮೂಲನಾ ಅಧಿಕಾರಿಗಳಾದ ಭವಾನಿಶಂಕರ್ ಕರೆ ನೀಡಿದರು.

ಅವರು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಾಗಮಂಗಲದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮಂಡ್ಯ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಮಲೇರಿಯಾ ವಿರೋಧಿ ಮಾಸಾಚರಣೆ  ಹಾಗೂ ಶ್ರೀ ಕ್ಷೇತ್ರದಿಂದ ಸಂಘಗಳ ಲಾಭಾಂಶ ವಿತರಣೆ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತಾಡಿದರು.

ನಮ್ಮ ಮನೆಗಳ ಹಾಗೂ ನಾವಿರುವ ವಾಸಸ್ಥಳದಲ್ಲಿ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತೆ ಕೈಗೊಂಡು ಮುಂಗಾರಿನ ಸಂದರ್ಭದಲ್ಲಿ ಆಗುವ ತೊಂದರೆಗಳನ್ನು ಜನರಲ್ಲಿ ಜಾಗೃತಿ ಮೂಡಿಸಿದರು.  ಮತ್ತೊಮ್ಮೆ ತಾವುಗಳು ಶುಚಿತ್ವವನ್ನು ಕಾಪಾಡಿಕೊಂಡು ಸೊಳ್ಳೆಗಳ ನಿರ್ಮೂಲನೆ ಮಾಡಿ ಮುಂಬರುವ ರೋಗಗಳನ್ನು ತಡೆಯಲು ಸಾಧ್ಯವೆಂದು ತಿಳಿಸಿದರು.

ಶ್ರೀ ಕ್ಷೇತ್ರ ತಾಲ್ಲೂಕು ಕ್ಷೇತ್ರ ಅಧಿಕಾರಿ ಹೇಮಲತಾ ಹೆಗ್ಗಡೆಯವರು ಮಾತನಾಡಿದರು .
ತಾಲ್ಲೂಕು ದಂಡಾಧಿಕಾರಿಗಳಾದ ಕುಂಞಿ ಅಹಮದ್ ಕಾರ್ಯಕ್ರಮದ ಉದ್ಘಾಟಿಸಿ ಆರೋಗ್ಯ ಸಿಬ್ಬಂದಿಗಳಿಗೆ ಬ್ಯಾಗ್ ವಿತರಣೆ ಮಾಡಿದರು. ತಾಲ್ಲೂಕು ಆರೋಗ್ಯಾಧಿಕಾರಿ ಗಳಾದ ರಮೇಶ್ ಸಸಿ ವಿತರಣೆ ಮಾಡಿದರು. ಪುರಸಭಾ ಅಧ್ಯಕ್ಷರಾದ ಆಶಾ, ವೇಣುಗೋಪಾಲ್ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು