3:59 PM Monday6 - April 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು

ಇತ್ತೀಚಿನ ಸುದ್ದಿ

ಪರಿಸರ ಮತ್ತು ನೀರಿನ ಶುಚಿತ್ವ ಕಾಪಾಡುವ ಮೂಲಕ ಮಲೇರಿಯಾ ಪಿಡುಗು ನಿವಾರಣೆ ಸಾಧ್ಯ

25/06/2021, 08:03

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾವಿರುವ ಸುತ್ತಮುತ್ತಲಿನ ಪರಿಸರ ಹಾಗೂ ನೀರಿನ ಶುಚಿತ್ವ ಕಾಪಾಡಿಕೊಳ್ಳುವ ಮುಖಾಂತರ ಮಲೇರಿಯಾ ರೋಗದ ಪಿಡುಗನ್ನು ತೊಲಗಿಸಲು ಮುಂಜಾಗೃತ ಕ್ರಮ ವಹಿಸುವಂತೆ ಮಲೇರಿಯಾ ಜಿಲ್ಲಾ ನಿರ್ಮೂಲನಾ ಅಧಿಕಾರಿಗಳಾದ ಭವಾನಿಶಂಕರ್ ಕರೆ ನೀಡಿದರು.

ಅವರು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಾಗಮಂಗಲದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮಂಡ್ಯ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಮಲೇರಿಯಾ ವಿರೋಧಿ ಮಾಸಾಚರಣೆ  ಹಾಗೂ ಶ್ರೀ ಕ್ಷೇತ್ರದಿಂದ ಸಂಘಗಳ ಲಾಭಾಂಶ ವಿತರಣೆ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತಾಡಿದರು.

ನಮ್ಮ ಮನೆಗಳ ಹಾಗೂ ನಾವಿರುವ ವಾಸಸ್ಥಳದಲ್ಲಿ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತೆ ಕೈಗೊಂಡು ಮುಂಗಾರಿನ ಸಂದರ್ಭದಲ್ಲಿ ಆಗುವ ತೊಂದರೆಗಳನ್ನು ಜನರಲ್ಲಿ ಜಾಗೃತಿ ಮೂಡಿಸಿದರು.  ಮತ್ತೊಮ್ಮೆ ತಾವುಗಳು ಶುಚಿತ್ವವನ್ನು ಕಾಪಾಡಿಕೊಂಡು ಸೊಳ್ಳೆಗಳ ನಿರ್ಮೂಲನೆ ಮಾಡಿ ಮುಂಬರುವ ರೋಗಗಳನ್ನು ತಡೆಯಲು ಸಾಧ್ಯವೆಂದು ತಿಳಿಸಿದರು.

ಶ್ರೀ ಕ್ಷೇತ್ರ ತಾಲ್ಲೂಕು ಕ್ಷೇತ್ರ ಅಧಿಕಾರಿ ಹೇಮಲತಾ ಹೆಗ್ಗಡೆಯವರು ಮಾತನಾಡಿದರು .
ತಾಲ್ಲೂಕು ದಂಡಾಧಿಕಾರಿಗಳಾದ ಕುಂಞಿ ಅಹಮದ್ ಕಾರ್ಯಕ್ರಮದ ಉದ್ಘಾಟಿಸಿ ಆರೋಗ್ಯ ಸಿಬ್ಬಂದಿಗಳಿಗೆ ಬ್ಯಾಗ್ ವಿತರಣೆ ಮಾಡಿದರು. ತಾಲ್ಲೂಕು ಆರೋಗ್ಯಾಧಿಕಾರಿ ಗಳಾದ ರಮೇಶ್ ಸಸಿ ವಿತರಣೆ ಮಾಡಿದರು. ಪುರಸಭಾ ಅಧ್ಯಕ್ಷರಾದ ಆಶಾ, ವೇಣುಗೋಪಾಲ್ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು