3:19 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಪರಿಸರ ಮತ್ತು ನೀರಿನ ಶುಚಿತ್ವ ಕಾಪಾಡುವ ಮೂಲಕ ಮಲೇರಿಯಾ ಪಿಡುಗು ನಿವಾರಣೆ ಸಾಧ್ಯ

25/06/2021, 08:03

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾವಿರುವ ಸುತ್ತಮುತ್ತಲಿನ ಪರಿಸರ ಹಾಗೂ ನೀರಿನ ಶುಚಿತ್ವ ಕಾಪಾಡಿಕೊಳ್ಳುವ ಮುಖಾಂತರ ಮಲೇರಿಯಾ ರೋಗದ ಪಿಡುಗನ್ನು ತೊಲಗಿಸಲು ಮುಂಜಾಗೃತ ಕ್ರಮ ವಹಿಸುವಂತೆ ಮಲೇರಿಯಾ ಜಿಲ್ಲಾ ನಿರ್ಮೂಲನಾ ಅಧಿಕಾರಿಗಳಾದ ಭವಾನಿಶಂಕರ್ ಕರೆ ನೀಡಿದರು.

ಅವರು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಾಗಮಂಗಲದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮಂಡ್ಯ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಮಲೇರಿಯಾ ವಿರೋಧಿ ಮಾಸಾಚರಣೆ  ಹಾಗೂ ಶ್ರೀ ಕ್ಷೇತ್ರದಿಂದ ಸಂಘಗಳ ಲಾಭಾಂಶ ವಿತರಣೆ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತಾಡಿದರು.

ನಮ್ಮ ಮನೆಗಳ ಹಾಗೂ ನಾವಿರುವ ವಾಸಸ್ಥಳದಲ್ಲಿ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತೆ ಕೈಗೊಂಡು ಮುಂಗಾರಿನ ಸಂದರ್ಭದಲ್ಲಿ ಆಗುವ ತೊಂದರೆಗಳನ್ನು ಜನರಲ್ಲಿ ಜಾಗೃತಿ ಮೂಡಿಸಿದರು.  ಮತ್ತೊಮ್ಮೆ ತಾವುಗಳು ಶುಚಿತ್ವವನ್ನು ಕಾಪಾಡಿಕೊಂಡು ಸೊಳ್ಳೆಗಳ ನಿರ್ಮೂಲನೆ ಮಾಡಿ ಮುಂಬರುವ ರೋಗಗಳನ್ನು ತಡೆಯಲು ಸಾಧ್ಯವೆಂದು ತಿಳಿಸಿದರು.

ಶ್ರೀ ಕ್ಷೇತ್ರ ತಾಲ್ಲೂಕು ಕ್ಷೇತ್ರ ಅಧಿಕಾರಿ ಹೇಮಲತಾ ಹೆಗ್ಗಡೆಯವರು ಮಾತನಾಡಿದರು .
ತಾಲ್ಲೂಕು ದಂಡಾಧಿಕಾರಿಗಳಾದ ಕುಂಞಿ ಅಹಮದ್ ಕಾರ್ಯಕ್ರಮದ ಉದ್ಘಾಟಿಸಿ ಆರೋಗ್ಯ ಸಿಬ್ಬಂದಿಗಳಿಗೆ ಬ್ಯಾಗ್ ವಿತರಣೆ ಮಾಡಿದರು. ತಾಲ್ಲೂಕು ಆರೋಗ್ಯಾಧಿಕಾರಿ ಗಳಾದ ರಮೇಶ್ ಸಸಿ ವಿತರಣೆ ಮಾಡಿದರು. ಪುರಸಭಾ ಅಧ್ಯಕ್ಷರಾದ ಆಶಾ, ವೇಣುಗೋಪಾಲ್ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು