7:45 PM Monday18 - May 2026
ಬ್ರೇಕಿಂಗ್ ನ್ಯೂಸ್
ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್…

ಇತ್ತೀಚಿನ ಸುದ್ದಿ

ಕಾರವಾರ ‘ಸಿದ್ಧಬಸವೇಶ್ವರ’ ಅನುಭವ ಮಂಟಪದಲ್ಲಿ ‘ಅನುಭಾವ ಸಂಗಮ’ ಸಂಪನ್ನ

26/08/2022, 20:49

ಕಾರವಾರ(reporterkarnataka.com):
ಶರಣ ಮಾಸದ ಕೊನೆಯ ಸೋಮವಾರದಂದು ಸುಕ್ಷೇತ್ರ ಕಾರವಾರದ ಬಂಗಾರಪ್ಪ ಕಾಲೋನಿಯ “ಸಿದ್ಧಬಸವೇಶ್ವರ” ಅನುಭವ ಮಂಟಪದಲ್ಲಿ “ಅನುಭಾವ ಸಂಗಮ” ಕಾರ್ಯಕ್ರಮ ಸಂತೋಷ ಸಡಗರದಿಂದ ಸಂಪನ್ನಗೊಂಡಿತು.


ಅಂದು ಶರಣ ಸಿದ್ದಯ್ಯಸ್ವಾಮಿ ಚೌಕಿಮಠ ಗೋನಾಳ ಅವರೊಂದಿಗೆ ಅವರ ಸಹೋದರರ ಕುಟುಂಬವು ಪ್ರತಿವರ್ಷದಂತೆ ಸ್ಥಳೀಯ ಆಯುಷ ಇಲಾಖೆಯ ಮುಖ್ಯಸ್ಥರಾದ ಶರಣ ಡಾ.ಮಲ್ಲಿಕಾರ್ಜುನ ಹಿರೇಮಠ ಮಸ್ಕಿ ಅವರ ನೇತೃತ್ವದಲ್ಲಿ ಒಂದಾಗಿ ಸಕಲ ಸಿದ್ದತೆಯನ್ನು ಮಾಡಿದ್ದಾರೆ. ಹಾಗೆಯೆ ಅಂದು ಸಮಾರಂಭದಲ್ಲಿ ಅಕ್ಕಪಕ್ಕದ ಎಲ್ಲಾ ಜನಸಮುದಾಯದ ಜನಾಸಕ್ತರು ಭಾಗವಹಿಸಿದ್ದು, ನಿಜಕ್ಕೂ “ಇವನಮ್ಮವ” ಎಂಬ ಅಪ್ಪ ಸಂಗನಬಸವಣ್ಣ ಅವರ ಪವಿತ್ರ ವಚನವು ನೆನಪಿಗೆ ತರುವಂತೆ ಆಯೋಜನೆಗೊಂಡಿದೆ. ಅಂದು ಅಲ್ಲಮಪ್ರಭೂ ಅನುಭಾವ ಪೀಠ, ಕಾಂತಾವರ, ಕಾರ್ಕಳ, ಉಡುಪಿಯ ಶರಣ ಜಗನ್ನಾಥಪ್ಪ ಪನಸಾಲೆ ಜನವಾಡಾ ಅವರು ಬಸವಾದಿ ಶರಣರ ಅನೇಕ ಪವಿತ್ರ ವಚನಗಳನ್ನು ಉಲ್ಲೇಖಿಸುತ್ತಾ, ಅಪ್ಪ ಸಂಗನಬಸವಣ್ಣ ಅವರು ಹಾಕಿಕೊಟ್ಟ ಪಥವನ್ನು ನಾವೆಲ್ಲರೂ ಅನುಸರಿಸಿದರೆ ಮಾತ್ರ ಈ ಜಗತ್ತಿನ ಭಾವಿ ಜನಾಂಗವು ಸುರಕ್ಷಿತವಾಗಿ ಬದುಕಲು ಸಾಧ್ಯವೆಂಬ ಮಾತನ್ನು ಹಲವಾರು ದೃಷ್ಟಾಂತಗಳೊಂದಿಗೆ ಹೇಳಿದರು. ನಂತರ ಮಹಾಪ್ರಸಾದದೊಂದಿಗೆ ಕಾರ್ಯಕ್ರಮವು ಮಂಗಳವಾಗಿ ಮುಕ್ತಾಯಗೊಂಡಿತ್ತು, 

ಇತ್ತೀಚಿನ ಸುದ್ದಿ

ಜಾಹೀರಾತು