ಇತ್ತೀಚಿನ ಸುದ್ದಿ
ಸೆ.2 ರಂದು ಮೋದಿ ಮಂಗಳೂರಿಗೆ: ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೋಸ್ಟಲ್ ವುಡ್ ದಿಗ್ಗಜರ ಮನವಿ
27/08/2022, 14:20
ಮಂಗಳೂರು(reporterkarnataka.com):ಸೆಪ್ಟೆಂಬರ್ 2ರಂದು ಮಂಗಳೂರಿನ ಹೊಸ ಬಂದರಿನ ಎರಡನೇ ಹಂತದ ಪೂರ್ಣಗೊಂಡ ಕಾಮಗಾರಿಯ ಉದ್ಘಾಟನಾ ಸಮಾರಂಭಕ್ಕೆ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಗಮಿಸಲಿದ್ದು, ಈ ಕಾರ್ಯಕ್ರಮಕ್ಕೆ ಅತಿ ಹೆಚ್ಚು ಸಂಖ್ಯೆಯಲ್ಲಿ ಆಗಮಿಸುವಂತೆ ತುಳು ನಾಟಕ ಹಾಗೂ ಚಲನಚಿತ್ರ ಕಲಾವಿದರಾದ ದೇವದಾಸ್ ಕಾಪಿಕಾಡ್, ಭೋಜರಾಜ ವಾಮಂಜೂರು, ಅರವಿಂದ ಬೋಳಾರ್, ನವೀನ್ ಡಿ ಪಡೀಲ್ ಮನವಿ ಮಾಡಿದ್ದಾರೆ.
ಈ ಬಗ್ಗೆ ಮನವಿ ಮಾಡಿಕೊಂಡಿರುವ ದೇವದಾಸ್ ಕಾಪಿಕಾಡ್, ನರೇಂದ್ರ ಮೋದಿ ವಿಶ್ವವೇ ಮೆಚ್ಚಿದ ನಾಯಕ. ಇಂತಹ ನಾಯಕ ಮಂಗಳೂರಿಗೆ ಬರುತ್ತಿರುವ ಸಂದರ್ಭದಲ್ಲಿ ಅವರನ್ನು ತುಳುನಾಡಿನ ನಾವೆಲ್ಲರೂ ಮನಪೂರ್ವಕವಾಗಿ ಸ್ವಾಗತಿಸಬೇಕೆಂದು ಮನವಿ ಮಾಡಿದ್ದಾರೆ.













