3:04 AM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಅಧ್ಯಕ್ಷರಾಗಲು ಪ್ಯಾನ್–ಇಂಡಿಯಾ ವರ್ಚಸ್ಸು ಹೊಂದಿರುವ ರಾಹುಲ್ ಗಾಂಧಿ ಮಾತ್ರ ಅರ್ಹರು: ಖರ್ಗೆ

27/08/2022, 19:05

ಬೆಂಗಳೂರು(reporterkarnataka.com): ರಾಹುಲ್ ಗಾಂಧಿಯಂತೆ ಪ್ಯಾನ್–ಇಂಡಿಯಾ ವರ್ಚಸ್ಸು ಹೊಂದಿರುವವರು ಬೇರೆ ಯಾರೂ ಇಲ್ಲ. ಆದ್ದರಿಂದ ಅವರನ್ನೇ ಪುನಃ ಕಾಂಗ್ರೆಸ್ ಅಧ್ಯಕ್ಷರಾಗುವಂತೆ ಒತ್ತಾಯಿಸಲಾಗುವುದು ಎಂದು ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಪಕ್ಷದ ಮತ್ತು ದೇಶದ ಹಿತಕ್ಕಾಗಿ ಮತ್ತು ಆರ್ ಎಸ್ ಎಸ್ –ಬಿಜೆಪಿ ವಿರುದ್ಧದ ಹೋರಾಟಕ್ಕಾಗಿ ಅಧಿಕಾರ ವಹಿಸಿಕೊಳ್ಳುವಂತೆ ಅವರ ಬಳಿ ವಿನಂತಿಸಲಾಗುವುದು ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನುಡಿದರು.

ಪಕ್ಷವನ್ನು ಮುನ್ನಡೆಸುವವರು ದೇಶಾದ್ಯಂತ ಪರಿಚಿತರಾಗಿರಬೇಕು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ, ಪಶ್ಚಿಮ ಬಂಗಾಳದಿಂದ ಗುಜರಾತ್ವರೆಗೆ ಬೆಂಬಲ ಹೊಂದಿರಬೇಕು. ಪಕ್ಷದಲ್ಲಿ ಸಂಪೂರ್ಣವಾದ ಮನ್ನಣೆ ಇರಬೇಕು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು