9:14 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಸಮಸ್ಯೆಗಳ ಪರಿಹಾರಕ್ಕೆ ಹುಡುಕುವ ಅನ್ವೇಷಣಾ ಶಾಸ್ತ್ರವೇ ಸಂಶೋಧನೆ: ಡಾ. ಜಯವಂತ ನಾಯಕ್

27/08/2022, 20:37

ಮಂಗಳೂರು(reporterkarnataka.com): ನಗರದ ಕೆನರಾ ಕಾಲೇಜಿನ ವಾಣಿಜ್ಯ ಸ್ನಾತಕೋತ್ತರ ವಿಭಾಗದಿಂದ ಆಯೋಜಿಸಿದ “ರಾಜ್ಯ ಮಟ್ಟದ ವಿಚಾರ ಮಂಡಣೆ” ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಯಾಗಿ  ಮಂಗಳೂರು ವಿ.ವಿ. ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕ  ಡಾ. ಜಯವಂತ ನಾಯಕ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಂಶೋಧನಾ ಪ್ರವೃತ್ತಿಯು ಸಣ್ಣ ವಯಸ್ಸಿನಿಂದಲೇ ಬರಬೇಕು ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಖಜಾಂಜಿ, ಸಿ.ಎ. ವಾಮನ್ ಕಾಮತ್ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜು ಜೀವನದಲ್ಲಿ ಕೇವಲ ಪಠ್ಯ ಪುಸ್ತಕಕ್ಕೆ ಮಾತ್ರ ತಮ್ಮನ್ನು ಸೀಮಿತಗೊಳಿಸದೆ ಸಂಶೋಧನೆಯ ಮೂಲಕ ಸಮಾಜದಲ್ಲಿರುವ ತೊಂದರೆಗಳಿಗೆ ಸೂಕ್ತ ಪರಿಹಾರವನ್ನು ಕಂಡು ಹುಡುಕಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲೆ ಡಾ.ಪ್ರೇಮಲತಾ ವಿ., ವಾಣಿಜ್ಯ ವಿಭಾಗದ ಮುಖ್ಯಸ್ಥೆ ದೇಜಮ್ಮ ಎ.,ವಾಣಿಜ್ಯ ಸ್ನಾತಕೋತ್ತರ ವಿಭಾಗ ಸಂಚಾಲಕಿ ಸ್ವಾತಿ ನಾಯಕ್, ಕಾರ್ಯಕ್ರಮದ ಸಂಯೋಜಕರಾದ ಡಾ. ಪ್ರಶಾಂತ್ ಭಟ್, ಮೇಘ, ಉಪಸ್ಥಿತರಿದ್ದರು.

ನಗರದ ವಿವಿಧ ಕಾಲೇಜುಗಳಿಂದ 25ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಸಂಶೋಧನಾ ಪ್ರಬಂಧವನ್ನು ಮಂಡಿಸಿದರು. ಮಮತಾ ಕಾರ್ಯಕ್ರಮವನ್ನು ನಿರೂಪಿಸಿದರು. ಅನ್ವಿಕಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು