4:45 AM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಕಡಲನಗರಿ ಕುಡ್ಲಕ್ಕೆ ಪ್ರಧಾನಿ: ಸಿದ್ಧಗೊಳ್ಳುತ್ತಿದೆ 2 ಲಕ್ಷ ಮಂದಿ ಆಸೀನರಾಗಬಲ್ಲ ಬೃಹತ್ ಪೆಂಡಾಲ್

28/08/2022, 12:49

ಅಶೋಕ್ ಕಲ್ಲಡ್ಕ ಮಂಗಳೂರು

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಪ್ರಧಾನಿ ನರೇಂದ್ರ ಮೋದಿ ಅವರು ಸೆ.2ರಂದು ಮಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಭರದ ಸಿದ್ಧತೆ ನಡೆದಿದೆ. ರಸ್ತೆಗಳ ತೇಪೆ ಕಾಮಗಾರಿ ಸಮರೋಪಾದಿಯಲ್ಲಿ ನಡೆಯುತ್ತಿದೆ. ಮತ್ತೊಂದೆಡೆ
ಕೂಳೂರು ಸಮೀಪದ ಗೋಲ್ಡ್ ಫಿಂಚ್ ಸಿಟಿ ಮೈದಾನಲ್ಲಿ 2 ಲಕ್ಷ ಜನರು ಕುಳಿತು ನೋಡಬಹುದಾದ ಬೃಹತ್ ಪೆಂಡಾಲ್ ನಿರ್ಮಾಣ ಕಾರ್ಯ ನಡೆಯುತ್ತಿದೆ.

ರಸ್ತೆ ತೇಪೆ ಕಾರ್ಯಕ್ಕೆ ಮಂಗಳೂರು ಮಹಾನಗರಪಾಲಿಕೆ ಅನುದಾನ ಬಿಡುಗಡೆ ಮಾಡಿದೆ. ರಸ್ತೆ ದುರಸ್ತಿ ಕಾರ್ಯ ಭರದಲ್ಲಿ ನಡೆಯುತ್ತಿದೆ. ಅದೇ ರೀತಿ ಪಿಡಬ್ಲ್ಯುಡಿಗೆ ಸೇರಿದ ರಸ್ತೆಗಳ ದುರಸ್ತಿ ಕಾಮಗಾರಿ ನಡೆಯುತ್ತಿದೆ.

ಈ ನಡುವೆ ಎನ್ಎಂಪಿಟಿಯಲ್ಲಿ ಲೋಕಾರ್ಪಣೆಗೊಳ್ಳಲಿರುವ ವಿವಿಧ ಯೋಜನೆಗಳ ಪಟ್ಟಿಯನ್ನು ಸಿದ್ಧಗೊಳಿಸಲಾಗಿದೆ. ಎನ್ಎಂಪಿಟಿ
ಕಾರ್ಯಕ್ರಮದ ನಂತರ ಪ್ರಧಾನಿ ಗೋಲ್ಡ್ ಫಿಂಚ್ ಸಿಟಿ ಮೈದಾನಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅದಕ್ಕಾಗಿ ಇಲ್ಲಿ ಬೃಹತ್ ಪೆಂಡಾಲ್ ನಿರ್ಮಾಣ ಕಾರ್ಯ ನಡೆಯುತ್ತಿದೆ. 2 ಲಕ್ಷ ಜನರು ಆಸೀನರಾಗಲು ಬೇಕಾಗುವ ಪೆಂಡಲ್ ನಿರ್ಮಾಣ ಕಾಮಗಾರಿ ಕೆಲಸ ನಡೆಯುತ್ತಿದೆ. ಇದರೊಂದಿಗೆ ಬೃಹತ್ ವೇದಿಕೆ ನಿರ್ಮಾಣವೂ ಆಗುತ್ತಿದೆ.80 ಅಡಿ ಅಗಲ, 60 ಅಡಿ ಉದ್ದ, 20 ಅಡಿ ಎತ್ತರದ ವೇದಿಕೆಯನ್ನು ಸಿದ್ಧಗೊಳ್ಳುತ್ತಿದೆ. ಸಭೆಯಲ್ಲಿ ಪಾಲ್ಗೊಂಡವರಿಗೆ ನೀರಿನ, ಮಜ್ಜಿಗೆಯ ವ್ಯವಸ್ಥೆ ಮಾಡಲಾಗಿದೆ.ವಾಹನಗಳ ಪಾರ್ಕಿಂಗ್ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು