9:07 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಅಥಣಿ: ಕೃಷ್ಣಾ ನದಿ ಪಾಲಾಗಿದ್ದ ಯುವಕನ ಶವ ಪತ್ತೆ; ಅಗ್ನಿಶಾಮಕ ದಳ, ಎನ್ ಡಿಆರ್ ಎಫ್ ಕಾರ್ಯಾಚರಣೆ

28/08/2022, 13:24

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಆಕಸ್ಮಿಕ ಕಾಲು ಜಾರಿ ಕೃಷ್ಣಾ ನದಿ ಪಾಲಾಗಿದ್ದ ಯುವಕನ ಶವ ಭಾನುವಾರ ಬಳಗ್ಗೆ ಅಥಣಿ ತಾಲೂಕಿನ ಸತ್ತಿ ಗ್ರಾಮದ ನದಿ ದಡದಲ್ಲಿ ಪತ್ತೆಯಾಗಿದೆ.

ಶ್ರಾವಣ ಮಾಸದ ಪೂಜೆಗಾಗಿ ಸ್ನಾನ ಮಾಡಿ ದೇವರಿಗೆ ನೀರು ಒಯ್ಯಲು ನದಿಗೆ ಇಳಿದಾಗ ಈ ದುರ್ಘಟನೆ ಸಂಭವಿಸಿತ್ತು. 

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಕಾಗಜಿ ಗಲ್ಲಿಯ ನಿವಾಸಿ ಸಾಗರ ರಾಜು ಹೊನಕಟ್ಟಿ (23) ಎಂಬಾತನೇ ಮೃತಪಟ್ಟ ಯುವಕ.  ಕಳೆದ ಎರಡು ದಿನಗಳಿಂದ ಹಲ್ಯಾಳ-ದರೂರ ಬ್ರಿಡ್ಜ್ ಅಕ್ಕಪಕ್ಕ ಹಾಗೂ ಇತರ ಕಡೆ ಅಗ್ನಿಶಾಮಕದಳ ಹಾಗೂ ಎಸ್.ಡಿ.ಆರ್.ಎಫ್ ತಂಡದವರು ಸುರಿಯುವ ಮಳೆಯಲ್ಲಿಯೂ ಕೂಡ ಶೋಧ ನಡೆಸಿದ್ದರು. 


ಸ್ಥಳಕ್ಕೆ ಅಗ್ನಿಶಾಮಕದಳ, ಎಸ್.ಡಿ.ಆರ್.ಎಫ್ ಹಾಗೂ ಪೋಲಿಸ್ ಆಧಿಕಾರಿಗಳು ಆಗಮಿಸಿ ಯುವಕನ‌ ಶವ ಹೊರತೆಗೆದಿದ್ದಾರೆ. ಅಥಣಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಜರುಗಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು