4:31 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಅಥಣಿ: ಕೃಷ್ಣಾ ನದಿ ಪಾಲಾಗಿದ್ದ ಯುವಕನ ಶವ ಪತ್ತೆ; ಅಗ್ನಿಶಾಮಕ ದಳ, ಎನ್ ಡಿಆರ್ ಎಫ್ ಕಾರ್ಯಾಚರಣೆ

28/08/2022, 13:24

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಆಕಸ್ಮಿಕ ಕಾಲು ಜಾರಿ ಕೃಷ್ಣಾ ನದಿ ಪಾಲಾಗಿದ್ದ ಯುವಕನ ಶವ ಭಾನುವಾರ ಬಳಗ್ಗೆ ಅಥಣಿ ತಾಲೂಕಿನ ಸತ್ತಿ ಗ್ರಾಮದ ನದಿ ದಡದಲ್ಲಿ ಪತ್ತೆಯಾಗಿದೆ.

ಶ್ರಾವಣ ಮಾಸದ ಪೂಜೆಗಾಗಿ ಸ್ನಾನ ಮಾಡಿ ದೇವರಿಗೆ ನೀರು ಒಯ್ಯಲು ನದಿಗೆ ಇಳಿದಾಗ ಈ ದುರ್ಘಟನೆ ಸಂಭವಿಸಿತ್ತು. 

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಕಾಗಜಿ ಗಲ್ಲಿಯ ನಿವಾಸಿ ಸಾಗರ ರಾಜು ಹೊನಕಟ್ಟಿ (23) ಎಂಬಾತನೇ ಮೃತಪಟ್ಟ ಯುವಕ.  ಕಳೆದ ಎರಡು ದಿನಗಳಿಂದ ಹಲ್ಯಾಳ-ದರೂರ ಬ್ರಿಡ್ಜ್ ಅಕ್ಕಪಕ್ಕ ಹಾಗೂ ಇತರ ಕಡೆ ಅಗ್ನಿಶಾಮಕದಳ ಹಾಗೂ ಎಸ್.ಡಿ.ಆರ್.ಎಫ್ ತಂಡದವರು ಸುರಿಯುವ ಮಳೆಯಲ್ಲಿಯೂ ಕೂಡ ಶೋಧ ನಡೆಸಿದ್ದರು. 


ಸ್ಥಳಕ್ಕೆ ಅಗ್ನಿಶಾಮಕದಳ, ಎಸ್.ಡಿ.ಆರ್.ಎಫ್ ಹಾಗೂ ಪೋಲಿಸ್ ಆಧಿಕಾರಿಗಳು ಆಗಮಿಸಿ ಯುವಕನ‌ ಶವ ಹೊರತೆಗೆದಿದ್ದಾರೆ. ಅಥಣಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಜರುಗಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು