7:33 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ಮಡಿಕೇರಿ ಚಲೋ ತಡೆಗೆ ವಿಧಿಸಿದ ನಿಷೇಧಾಜ್ಞೆಗೆ ತೆರೆ: ನಿಟ್ಟುಸಿರು ಬಿಟ್ಟ ಕೊಡಗಿನ ಜನತೆ

28/08/2022, 17:20

ಮಡಿಕೇರಿ(reporterkarnataka.com): ಜಿಲ್ಲೆಯಲ್ಲಿ ವಿಧಿಸಲಾಗಿದ್ದ ನಾಲ್ಕು ದಿನಗಳ ನಿಷೇಧಾಜ್ಞೆ ಶನಿವಾರ ಸಂಜೆಗೆ ಕೊನೆಗೊಂಡಿದ್ದು, ಕೊಡಗಿನ ಜನತೆ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. 

ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣದ ಬಳಿಕ ಉಂಟಾದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಆ. 26 ರಂದು ಕಾಂಗ್ರೆಸ್‌ನಿಂದ ಮಡಿಕೇರಿ ಚಲೋ ಮತ್ತು ಬಿಜೆಪಿಯಿಂದ ಜನ ಜಾಗೃತಿ ಸಮಾವೇಶ ಘೋಷಣೆಯಾಗಿತ್ತು . ಆದರೆ ಕೋಮು ಸೂಕ್ಷ್ಮ ಜಿಲ್ಲೆಯಾದ ಕೊಡಗಿನಲ್ಲಿ ಪರಿಸ್ಥಿತಿಯ ದುರ್ಲಾಭವನ್ನು ಪಡೆಯಲು ಹೊರಗಿನ ವ್ಯಕ್ತಿಗಳು ಹುನ್ನಾರ ನಡೆಸಿರುವುದು ಗೊತ್ತಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಆ . 24 ರ ಬೆಳಗ್ಗೆ 6 ರಿಂದ ಆ .27 ಸಂಜೆಯ ತನಕ ನಿಷೇಧಾಜ್ಞೆ ಜಾರಿಗೊಳಿಸಿತ್ತು. 

ಜಿಲ್ಲೆಯಲ್ಲಿ 4 ದಿನಗಳಿಂದ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಜನಜೀವನ ಎಂದಿನಂತೆಯೇ ಇತ್ತು. ಆದರೆ ಹೊರಗಿನ ಸಮಾಜಘಾತುಕರು ಜಿಲ್ಲೆಗೆ ನುಸುಳದಂತೆ ಎಲ್ಲಾ ಚೆಕ್‌ಪೋಸ್ಟ್‌ಗಳಲ್ಲಿಯೂ ಪೊಲೀಸ್ ಇಲಾಖೆಯಿಂದ ಹೆಚ್ಚಿನ ತಪಾಸಣೆಯೊಂದಿಗೆ ಹೈ ಅಲರ್ಟ್ ಘೋಷಿಸಲಾಗಿತ್ತು. ಇದರಿಂದಾಗಿ ಕೊಡಗಿನ ಪ್ರವಾಸೋದ್ಯಮದ ಮೇಲೂ ಕರಿನೆರಳು ಆವರಿಸಿತ್ತು. ಆದರೆ ಶನಿವಾರ ಸಂಜೆ 6 ಗಂಟೆಗೆ ನಿಷೇಧಾಜ್ಞೆ ಕೊನೆಕಗೊಂಡಿದ್ದು, ಜಿಲ್ಲೆಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಪೊಲೀಸ್ ಪಡೆಗಳೂ ಇದೀಗ ತಮ್ಮತಮ್ಮ ಜಿಲ್ಲೆಗಳತ್ತ ಪ್ರಯಾಣ ಬೆಳೆಸಿವೆ. ನಾಲ್ಕು ದಿನಗಳಿಂದ ಸ್ಥಗಿತವಾಗಿದ್ದ ವಾರದ ಸಂತೆಗಳೂ ಪುನರಾರಂಭಗೊಂಡಿವೆ.

ಇತ್ತೀಚಿನ ಸುದ್ದಿ

ಜಾಹೀರಾತು