6:39 AM Friday3 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಮಡಿಕೇರಿ ಚಲೋ ತಡೆಗೆ ವಿಧಿಸಿದ ನಿಷೇಧಾಜ್ಞೆಗೆ ತೆರೆ: ನಿಟ್ಟುಸಿರು ಬಿಟ್ಟ ಕೊಡಗಿನ ಜನತೆ

28/08/2022, 17:20

ಮಡಿಕೇರಿ(reporterkarnataka.com): ಜಿಲ್ಲೆಯಲ್ಲಿ ವಿಧಿಸಲಾಗಿದ್ದ ನಾಲ್ಕು ದಿನಗಳ ನಿಷೇಧಾಜ್ಞೆ ಶನಿವಾರ ಸಂಜೆಗೆ ಕೊನೆಗೊಂಡಿದ್ದು, ಕೊಡಗಿನ ಜನತೆ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. 

ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣದ ಬಳಿಕ ಉಂಟಾದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಆ. 26 ರಂದು ಕಾಂಗ್ರೆಸ್‌ನಿಂದ ಮಡಿಕೇರಿ ಚಲೋ ಮತ್ತು ಬಿಜೆಪಿಯಿಂದ ಜನ ಜಾಗೃತಿ ಸಮಾವೇಶ ಘೋಷಣೆಯಾಗಿತ್ತು . ಆದರೆ ಕೋಮು ಸೂಕ್ಷ್ಮ ಜಿಲ್ಲೆಯಾದ ಕೊಡಗಿನಲ್ಲಿ ಪರಿಸ್ಥಿತಿಯ ದುರ್ಲಾಭವನ್ನು ಪಡೆಯಲು ಹೊರಗಿನ ವ್ಯಕ್ತಿಗಳು ಹುನ್ನಾರ ನಡೆಸಿರುವುದು ಗೊತ್ತಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಆ . 24 ರ ಬೆಳಗ್ಗೆ 6 ರಿಂದ ಆ .27 ಸಂಜೆಯ ತನಕ ನಿಷೇಧಾಜ್ಞೆ ಜಾರಿಗೊಳಿಸಿತ್ತು. 

ಜಿಲ್ಲೆಯಲ್ಲಿ 4 ದಿನಗಳಿಂದ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಜನಜೀವನ ಎಂದಿನಂತೆಯೇ ಇತ್ತು. ಆದರೆ ಹೊರಗಿನ ಸಮಾಜಘಾತುಕರು ಜಿಲ್ಲೆಗೆ ನುಸುಳದಂತೆ ಎಲ್ಲಾ ಚೆಕ್‌ಪೋಸ್ಟ್‌ಗಳಲ್ಲಿಯೂ ಪೊಲೀಸ್ ಇಲಾಖೆಯಿಂದ ಹೆಚ್ಚಿನ ತಪಾಸಣೆಯೊಂದಿಗೆ ಹೈ ಅಲರ್ಟ್ ಘೋಷಿಸಲಾಗಿತ್ತು. ಇದರಿಂದಾಗಿ ಕೊಡಗಿನ ಪ್ರವಾಸೋದ್ಯಮದ ಮೇಲೂ ಕರಿನೆರಳು ಆವರಿಸಿತ್ತು. ಆದರೆ ಶನಿವಾರ ಸಂಜೆ 6 ಗಂಟೆಗೆ ನಿಷೇಧಾಜ್ಞೆ ಕೊನೆಕಗೊಂಡಿದ್ದು, ಜಿಲ್ಲೆಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಪೊಲೀಸ್ ಪಡೆಗಳೂ ಇದೀಗ ತಮ್ಮತಮ್ಮ ಜಿಲ್ಲೆಗಳತ್ತ ಪ್ರಯಾಣ ಬೆಳೆಸಿವೆ. ನಾಲ್ಕು ದಿನಗಳಿಂದ ಸ್ಥಗಿತವಾಗಿದ್ದ ವಾರದ ಸಂತೆಗಳೂ ಪುನರಾರಂಭಗೊಂಡಿವೆ.

ಇತ್ತೀಚಿನ ಸುದ್ದಿ

ಜಾಹೀರಾತು