11:33 AM Wednesday6 - August 2025
ಬ್ರೇಕಿಂಗ್ ನ್ಯೂಸ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:…

ಇತ್ತೀಚಿನ ಸುದ್ದಿ

ಸಾಲ ಖಾತೆಗೆ ಕೊರೊನಾ ಪರಿಹಾರ ಧನ ವರ್ಗಾಯಿಸಿದ ಕೆನರಾ ಬ್ಯಾಂಕ್: ಆಟೋ ಚಾಲಕನ ಕಣ್ಣೀರ ಕಥೆ ವೈರಲ್ ಆಗುತ್ತಿದ್ದಂತೆ ಹಣ ಮರು ವರ್ಗಾವಣೆ !!

25/06/2021, 15:03

ಅಶೋಕ್ ಕಲ್ಲಡ್ಕ ಮಂಗಳೂರು

info.reporterkarnataka@gmail.com

ಬಡಪಾಯಿ ಆ ಆಟೋ ಚಾಲಕನ ಬ್ಯಾಂಕ್ ಅಕೌಂಟ್ ನಲ್ಲಿದ್ದ ಒಟ್ಟು 5700 ರೂಪಾಯಿ ಮಂಗಮಾಯವಾಗಿತ್ತು. ಕೊರೊನಾದ ಕಷ್ಟ ಕಾಲಕ್ಕೆ ಅಂತ ಮಡಗಿಟ್ಟ ಆ ಹಣ ಇದ್ದಕ್ಕಿದ್ದ ಹಾಗೆ ಮಾಯವಾಗಿ ಖಾತೆಯಲ್ಲಿ ಜೀರೋ ಬ್ಯಾಲೆನ್ಸ್ ಕಾಣಿಸುತ್ತಿತ್ತು. ಹಾಗೆಂತ ಆ ಬಡಪಾಯಿಯ ಖಾತೆಯಿಂದ ನೈಜಿರಿಯನ್ ಫ್ರಾಡ್ ಗಳಾಗಲಿ, ದೇಶದೊಳಗಿನ ಹ್ಯಾಕರ್ ಗಳಾಗಲಿ ಹಣ ಲಪಟಾಯಿಸಿಲ್ಲ. ಬದಲಿಗೆ ಆಟೋ ಚಾಲಕ

ಖಾತೆ ಹೊಂದಿದ್ದ ರಾಷ್ಟ್ರೀಕೃತ ಬ್ಯಾಂಕ್ ನ ಅಧಿಕಾರಿಗಳೇ ಹಣ ವರ್ಗಾಯಿಸಿದ್ದರು. ದಿನದ ತುತ್ತು ಕೂಳಿಗೆ ಅಂತ ಜೋಪಾನ ಮಾಡಿಟ್ಟ ಆ ಹಣವನ್ನು ಮನೆ ಕಂತು ಬಾಕಿ ಇದೆ ಅಂತ ಸಾಲದ ಖಾತೆಗೆ ಬ್ಯಾಂಕ್ ಸಿಬ್ಬಂದಿಗಳು ವರ್ಗಾಯಿಸಿದ್ದರು.

ಇದೆಲ್ಲ ನಡೆದದ್ದು ಮಂಗಳೂರು ಹೊರವಲಯದ ಬೈಕಂಪಾಡಿಯ ಕೆನರಾ ಬ್ಯಾಂಕ್ ಬ್ರಾಂಚ್ ನಲ್ಲಿ. ಬಶೀರ್ ಎಂಬ ಆಟೋ ಚಾಲಕನ ಎಸ್ ಬಿ ಖಾತೆಯಿಂದ ಹಣವನ್ನು ಸಾಲ ಖಾತೆಗೆ ವರ್ಗಾಯಿಸಲಾಗಿತ್ತು.

ಸುರತ್ಕಲ್ ಸಮೀಪದ ಕುಳಾಯಿಯ (ಸದ್ಯ ಸೂರಿಂಜೆ ನಿವಾಸಿ) ಆಟೋ ಚಾಲಕನಾದ ಬಶೀರ್ ಅವರು ಬೈಕಂಪಾಡಿಯ ಕೆನರಾ ಬ್ಯಾಂಕ್ ನಿಂದ ಮನೆ ಸಾಲ ಪಡೆದಿದ್ದರು. ಕೊರೊನಾ ಲಾಕ್ ಡೌನ್ ನಿಂದ ಬಾಡಿಗೆಯಿಲ್ಲದೆ ಅವರಿಗೆ ಮೇ ತಿಂಗಳ ಕಂತು ಕಟ್ಟಲು ಸಾಧ್ಯವಾಗಲಿಲ್ಲ. ಸಾಲ ಕೊಟ್ಟ ಕೆನರಾ ಬ್ಯಾಂಕ್ ಅಧಿಕಾರಿಗಳಲ್ಲಿ ಮೂರ್ನಾಲ್ಕು ತಿಂಗಳು ಕಂತು ಪಾವತಿಗೆ ವಿನಾಯಿತಿ ಕೇಳಿದ್ದರು. ಆದರೆ ಬ್ಯಾಂಕ್ ಕಡೆಯಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗಲಿಲ್ಲ. ಬದಲಿಗೆ ಬ್ಯಾಂಕ್ ಸಿಬ್ಬಂದಿಗಳು ಬಶೀರ್  ಅವರ ಎಸ್ ಬಿ ಖಾತೆಯಲ್ಲಿದ್ದ 2700 ರೂಪಾಯಿ ಹಾಗೂ ಆಟೋ ಚಾಲಕರಿಗೆ ರಾಜ್ಯ ಸರಕಾರ ಕೊರೊನಾ ಪರಿಹಾರವಾಗಿ ನೀಡಿದ 3,000 ರೂಪಾಯಿಯನ್ನು ಮನೆ ಸಾಲಕ್ಕೆ ಜಮಾ ಮಾಡಿದ್ದರು. ಇದರಿಂದ ಬಶೀರ್ ಅವರಿಗೆ ಆಕಾಶವೇ ಕಳಚಿದಂತಾಯಿತು. ವೃದ್ದ ತಾಯಿ ಸಹಿತ 6 ಮಂದಿಯ ಕುಟುಂಬವನ್ನು ಸಾಕುವ ಜವಾಬ್ದಾರಿ ಹೊತ್ತ ಬಶೀರ್ ಅವರು ದಿಕ್ಕೇ ಕಾಣದಂತಾಗಿ ತಲೆ ಮೇಲೆ ಕೈಹೊತ್ತು ಕುಳಿತರು.

ಬಶೀರ್ ಅವರ ಕಣ್ಣೀರ ಕಥೆ ಗೊತ್ತಾಗುತ್ತಿದ್ದಂತೆ ಡಿವೈಎಫ್ ಐ ನಾಯಕ ಮುನೀರ್ ಕಾಟಿಪಳ್ಳ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದು ಬಿಟ್ಟರು. ಇದು ವ್ಯಾಪಕ ಪ್ರಚಾರ ಪಡೆಯಿತು. ಬ್ಯಾಂಕ್  ಅಧಿಕಾರಿಗಳ ಕ್ರಮದ ಕುರಿತು ದೊಡ್ಡ ಚರ್ಚೆಯನ್ನೇ ಅದು ಹುಟ್ಟುಹಾಕಿತು. ಬ್ಯಾಂಕ್ ಅಧಿಕಾರಿಗಳ ವಲಯದಲ್ಲೂ ಬಿಸಿ ಬಿಸಿ ಚರ್ಚೆಗೆ ಕಾರಣವಾಯಿತು. ಯೂನಿಯನ್ ಪದಾಧಿಕಾರಿಗಳು ಬಶೀರ್ ಗೆ ಪರಿಹಾರದ (ರೀ ಷೆಡ್ಯೂಲ್ ಅವಕಾಶದ) ದಾರಿಗಳನ್ನು ವಿವರಿಸಿದರು. 

ಇದರಿಂದ ತಕ್ಷಣ ಎಚ್ಚೆತ್ತುಕೊಂಡ ಕೆನರಾ ಬ್ಯಾಂಕ್ ಅಧಿಕಾರಿಗಳು ಸರಕಾರದಿಂದ ಪರಿಹಾರವಾಗಿ ಬಂದಿದ್ದ 3 ಸಾವಿರ ರೂಪಾಯಿಗಳನ್ನು ಬಶೀರ್ ಖಾತೆಗೆ ಮರಳಿಸಿದ್ದಾರೆ. ಜತೆಗೆ ಮನೆ ಸಾಲ ರೀಷೆಡ್ಯೂಲ್ ಆಫರನ್ನೂ ನೀಡಿದ್ದಾರೆ. 

ಇಷ್ಟೇ ಅಲ್ಲದೆ ಬಶೀರ್  ಅವರ ನೆರವಿಗೆ ಕೆಲವರು ಮುಂದೆ ಬಂದಿದ್ದಾರೆ. ಪುಣೆಯ ವಿನುತಾ ಮಲ್ಯ ಮತ್ತವರ ಗೆಳೆಯರು ಬಶೀರ್ ಅವರ 5-6 ತಿಂಗಳ ಮನೆ ಸಾಲದ ಕಂತು ಪಾವತಿಸಲು ಮುಂದೆ ಬಂದಿದ್ದಾರೆ.

ಬ್ಯಾಂಕ್ ಅಧಿಕಾರಿಗಳು ಇನ್ನಾದರೂ ಮಹಾನ್ ಚೇತನ ಅಮ್ಮೆಂಬಳ ಸುಬ್ಬರಾವ್ ಪೈ ಅವರು ಯಾವ ಉದ್ದೇಶವಿಟ್ಟು ಕೊಂಡು ಕೆನರಾ ಬ್ಯಾಂಕ್ ಸ್ಥಾಪಿಸಿದ್ದರು ಎನ್ನುವುದು ಸ್ವಲ್ಪ ಮಟ್ಟಿಗಾದರೂ ಅರ್ಥ ಮಾಡಿಕೊಳ್ಳುವುದು ಉತ್ತಮ.

ಇತ್ತೀಚಿನ ಸುದ್ದಿ

ಜಾಹೀರಾತು