4:07 PM Friday3 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ…

ಇತ್ತೀಚಿನ ಸುದ್ದಿ

ಪಿಯು ವಿದ್ಯಾರ್ಥಿನಿಗೆ ಬ್ಲ್ಯಾಕ್‌ಮೇಲ್‌: 1.9 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, ಹಣ ಸುಲಿಗೆ ಮಾಡಿದ ಪ್ರಿಯಕರ

28/08/2022, 19:53

ಬೆಂಗಳೂರು (reporterkarnataka.com):
ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಪ್ರಿಯಕರ ಬ್ಲಾಕ್‌ಮೇಲ್‌ ಮಾಡಿ 1.9 ಕೆಜಿ ಚಿನ್ನ ಹಾಗೂ 5 ಕೆಜಿ ಬೆಳ್ಳಿ ವಸ್ತುಗಳನ್ನು ಸುಲಿಗೆ ಮಾಡಿದ ಘಟನೆ 
ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ತನ್ನೊಂದಿಗಿರುವ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ 
ಪ್ರಿಯಕರ ಸುಮಿತ್ ಎಂಬಾತ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಗೆ ಬ್ಲಾಕ್‌ಮೇಲ್‌ ಮಾಡಿ 1.9 ಕೆಜಿ ಚಿನ್ನ ಹಾಗೂ 5 ಕೆಜಿ ಬೆಳ್ಳಿ ವಸ್ತುಗಳನ್ನು ಸುಲಿಗೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿ ಯುವಕನನ್ನು ಬ್ಯಾಟರಾಯಪುರ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ 300 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ. 

ಇತ್ತೀಚೆಗೆ ಆಕೆಯನ್ನು ಭೇಟಿಯಾಗಿ ಸುಮಿತ್,ನೀನು ಹಣ ಕೊಡದೆ ಹೋದರೆ ನನ್ನ ಮೊಬೈಲ್‌ನಲ್ಲಿರುವ ತೆಗೆದಿರುವ ಫೋಟೋಗಳನ್ನು ಆಶ್ಲೀಲ ರೀತಿ ಎಡಿಟ್‌ ಮಾಡಿ ನಿಮ್ಮ ತಂದೆಗೆ ತೋರಿಸುತ್ತೇನೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಸಹ ಹರಿಬಿಡುತ್ತೇನೆ ಎಂದು ಸಂತ್ರಸ್ತೆಗೆ ಆತ ಬೆದರಿಸಿದ್ದ.

ಬ್ಲಾಕ್‌ಮೇಲ್‌ಗೆ ಹೆದರಿ ಆಕೆ, ಮೊದ ಮೊದಲು ಮನೆಯಲ್ಲಿ ತಂದೆಗೆ ತಿಳಿಯದಂತೆ .2,500 ರಿಂದ 10 ಸಾವಿರ ರವರೆಗೆ ಕೊಟ್ಟಿದ್ದಳು. ಪದೇ ಪದೇ ಆತ ಹಣಕ್ಕೆ ಬೇಡಿಕೆ ಇಡುತ್ತಿದ್ದ. ಕೆಲ ದಿನಗಳ ಹಿಂದೆ ಮಾತನಾಡುವ ನೆಪದಲ್ಲಿ ಸಂತ್ರಸ್ತೆಯನ್ನು ಆರೋಪಿ ಕರೆಸಿಕೊಂಡಿದ್ದ. ಆಗ ಕುಡಿಯಲು ನೀರಿನ ಬಾಟಲ್‌ ಕೊಟ್ಟಿದ್ದ ಆತ, ‘ನೀರು ಕುಡಿದ ಬಳಿಕ ಅದರಲ್ಲಿ ಡ್ರಗ್‌್ಸ ಮಿಶ್ರಣ ಮಾಡಲಾಗಿತ್ತು.

ಮನೆಯಲ್ಲಿರುವ ಬಂಗಾರ ತಂದು ಕೊಡದೆ ಹೋದರೆ ಆಶ್ಲೀಲ ವಿಡಿಯೋ ಸಾರ್ವಜನಿಕವಾಗಿ ಪ್ರದರ್ಶಿಸುತ್ತೇನೆ ಎಂದು ಬೆದರಿಸಿದ್ದ. ಈ ಮಾತಿಗೆ ಭೀತಿಗೊಂಡ ಆಕೆ, ಮನೆಯಲ್ಲಿದ್ದ 1.900 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ವಸ್ತುಗಳನ್ನು ತೆಗೆದುಕೊಂಡು ಹೋಗಿ ಆರೋಪಿಗೆ ಕೊಟ್ಟಿದ್ದಳು ಎಂದು ದೂರಿನಲ್ಲಿ ಹೇಳಲಾಗಿದೆ.

ಕೆಲ ದಿನಗಳ ಹಿಂದೆ ಮನೆಯಲ್ಲಿದ್ದ ಚಿನ್ನಕ್ಕೆ ವಿಮೆ ನವೀಕರಣ ಮಾಡಿಸುವ ಮಾಡಿಸುವ ಸಲುವಾಗಿ ಸಂತ್ರಸ್ತೆಯ ತಂದೆ, ಮನೆಯಲ್ಲಿದ್ದ ಬಂಗಾರವನ್ನು ತೆಗೆದುಕೊಳ್ಳಲು ಹೋಗಿದ್ದಾರೆ. ಆದರೆ ಆ ವೇಳೆ ಬಾಕ್ಸ್‌ಗಳಲ್ಲಿ ಚಿನ್ನ ಕಾಣದೆ ಗಾಬರಿಗೊಂಡಿದ್ದಾರೆ. ಆಗ ಮಗಳನ್ನು ವಿಚಾರಿಸಿದಾಗ ಸುಲಿಗೆ ಕೃತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು