1:46 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚಿತ್ರದುರ್ಗ ಮುರುಘಾ ಮಠದ ಸ್ವಾಮೀಜಿಗೆ ಬಂಧನ ಭೀತಿ: ಪೀಠತ್ಯಾಗ ಮಾಡುತ್ತಾರಾ ಶ್ರೀಗಳು?

29/08/2022, 11:52

ಚಿತ್ರದುರ್ಗ(reporterkarnataka.com): ಬಸವ ತತ್ವಕ್ಕೆ ಹೆಸರು ಪಡೆದ ಚಿತ್ರದುರ್ಗದ ಮುರುಘಾ ಮಠದ ಶ್ರೀ ಶಿವಮೂರ್ತಿ ಶಿವಶರಣ ಸ್ವಾಮೀಜಿಗೆ ಬಂಧನ ಭೀತಿ ಎದುರಾಗಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಶ್ರೀಗಳು ಗುರಿಯಾಗಿದ್ದಾರೆ.
ಶ್ರೀಗಳ ವಿರುದ್ಧ ದೂರು ನೀಡಿರುವ ಇಬ್ಬರು ಬಾಲಕಿಯರನ್ನು ಸಿಡಬ್ಲ್ಯುಸಿ ಎದುರು ವಿಚಾರಣೆ ನಡೆಸಲಾಗಿದೆ. ಅಲ್ಲಿ ಇಬ್ಬರು ಬಾಲಕಿಯರು ಮುರಘ ಶ್ರೀಗಳಿಂದ ತಮಗೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಬಾಲಕಿಯರ ವೈದ್ಯಕೀಯ ಪರೀಕ್ಷೆಯೂ ಪೂರ್ಣಗೊಂಡಿದೆ. ಇದೀಗ ಬಾಲಕಿಯರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ನಡೆಯಲಿದೆ. ಅಲ್ಲೂ ಬಾಲಕಿಯರು ಮುರುಘಾ ಮಠದ ಸ್ವಾಮೀಜಿಯಿಂದ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಿದರೆ, ಶ್ರೀಗಳ ಬಂಧನ ಅನಿವಾರ್ಯವಾಗುತ್ತದೆ. ಪೊಲೀಸರು ಫೊಕ್ಸೊ ಕಾಯ್ದೆಯಡಿ ಸ್ವಾಮೀಜಿಯವರನ್ನು ಬಂಧಿಸಬೇಕಾಗುತ್ತದೆ.
ಮಠದ ಆಡಳಿತಕ್ಕೊಳಪಟ್ಟ ವಸತಿಗೃಹದಲ್ಲಿ ವಾಸವಾಗಿದ್ದ ಈ ಇಬ್ಬರು ಬಾಲಕಿಯರು ತಮ್ಮ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಲ್ಲಿ ಅವರ ದೂರನ್ನು ಸ್ವೀಕರಿಸಿಲ್ಲ. ಬಳಿಕ ಅವರು ಮೈಸೂರಿನ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದರು. ನಂತರ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂತು.

ಇತ್ತೀಚಿನ ಸುದ್ದಿ

ಜಾಹೀರಾತು