10:28 PM Sunday22 - March 2026
ಬ್ರೇಕಿಂಗ್ ನ್ಯೂಸ್
ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ…

ಇತ್ತೀಚಿನ ಸುದ್ದಿ

ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ನಿಂದ ವನಮಹೊತ್ಸವ: 100ಕ್ಕೂ ಹೆಚ್ಚು ಸಸಿ ನೆಟ್ಟು  ಹಸಿರು ಸಂಭ್ರಮ

25/06/2021, 15:34

ಬ್ರಹ್ಮಾವರ(reporterkarnataka news); ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ, ವನಮಹೋತ್ಸವದ ಅಂಗವಾಗಿ ಗಿಡಗಳನ್ನು ನೆಡುವ ಕಾಯ೯ಕ್ರಮವು ಇಂದು  ಬೆಳಗ್ಗೆ ಕ್ಲಬ್ಬಿನ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿ ಆಗಿದ್ದ, ಅನಿವಾಸಿ ಭಾರತಿ ಹಾಗೂ ಉದ್ಯಮಿ ಕೆಂಜೂರು ಶಶಿಧರ  ಶೆಟ್ಟಿ ಬಹರೈನ್ ಅವರು ಗಿಡ ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೆ ಸಂದರ್ಭದಲ್ಲಿ ಮಾತನಾಡಿದ ಅವರು, ಎಲ್ಲ  ಜನರು ತಮ್ಮ ಮನೆಯ ಆವರಣಗಳಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವ ಆಚರಿಸಿ ಪರಿಸರ ಬೆಳೆಸಲು ಕರೆ ಕೊಟ್ಟರು.

100ಕ್ಕೂ ಹೆಚ್ಚು ಗಿಡಗಳನ್ನು ಕ್ಲಬ್ಬಿನ ಆವರಣದಲ್ಲಿ ನೆಡಲಾಯಿತು. ಮುಂಬರುವ ದಿನಗಳಲ್ಲಿ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇನ್ನಷ್ಟು ಪರಿಸರ ಕಾಳಜಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದೇವೆ ಎಂದು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಎಂ. ಚಂದ್ರಶೇಖರ ಹೆಗ್ಡೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ಗ್ರೆಗೊರಿ ಡಿಸಿಲ್ವ ಹಾಗೂ ಸದಸ್ಯರಾದ ಜೇಮ್ಸ್ ಒಲಿವೆಯಿರ, ಜೋಸೆಫ್ ಸುವರೆಸ್, ಸುದೇಶ್ ಹೆಗ್ಡೆ, ಪ್ರಮೋದ್ ಶೆಟ್ಟಿ, ಪ್ರಸನ್ನ ಶೆಟ್ಟಿ , ವಿವೇಕ್ ಕರ್ನೇಲಿಯೋ ಮತ್ತಿತರರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು