10:56 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಗೌರಿಹಬ್ಬ; ಕಾಫಿನಾಡಿನಲ್ಲಿ ವಿಶೇಷ ಗಂಗಾ ಪೂಜೆ, ಬಾಗಿನ ಸಮರ್ಪಿಸಿದ ಮಹಿಳೆಯರು, ಮಕ್ಕಳು

30/08/2022, 21:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಬಣಕಲ್, ಬಾಳೂರು, ಕೊಟ್ಟಿಗೆಹಾರ ಸುತ್ತಮುತ್ತ ಮಹಿಳೆಯರು, ಮಕ್ಕಳು ವಿಶೇಷ ಗಂಗೆ ಪೂಜೆ ನಡೆಸಿ ಬಾಗಿನ ಅರ್ಪಿಸಿ ಗೌರಿಹಬ್ಬ ಆಚರಿಸಿದರು.

ದೇವನಗೂಲ್ ಗ್ರಾಮದಲ್ಲಿ ಪೂಜೆ ನೆರವೇರಿಸಿ ಮಾತನಾಡಿದ ಗೃಹಿಣಿ ಯಶೋದಮ್ಮ, ಹಿಂದು ಸಂಪ್ರದಾಯದಲ್ಲಿ ವಿಶೇಷವಾಗಿ ಮಲೆನಾಡಿನ ಭಾಗದಲ್ಲಿ ಗೌರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಹಬ್ಬ ಮಹಿಳೆಯರ ಪಾಲಿಗೆ ಶ್ರೇಷ್ಠ ಹಬ್ಬವಾಗಿದೆ. ರಂಗೋಲಿಯ ಚಿತ್ತಾರ, ಸುಮಂಗಲಿಯರಿಗೆ ಹದಿನಾರು ಸುತ್ತಿನ ಗೌರಿ ದಾರ ಪೂಜಿಸಿ ಕೈಗೆ ಕಟ್ಟಿಕೊಳ್ಳುತ್ತಾರೆ. ಗೌರಿ ಹಬ್ಬದಂದು ಸುಮಂಗಲಿಯರಿಗೆ ನೀಡುವ ಬಾಗಿನ ಅತಿ ಶ್ರೇಷ್ಠವಾದುದು. ಅದಕ್ಕೆಂದೇ ಐದು ಮುತ್ತೈದೆಯರಿಗೆ ಈ ದಿನ ಬಾಗಿನ ನೀಡುವ ಸಂಪ್ರದಾಯವಿದೆ. ಅರಿಶಿಣ ಕುಂಕುಮ, ಹಸಿರುಬಳೆ, ಕರಿಮಣಿ ಬಾಚಣಿಗೆ, ಸೀರೆ ಅಥವಾ ಬ್ಲೌಸ್ ಪೀಸ್, ಕಾಯಿ ಹಣ್ಣು ಧಾನ್ಯಗಳನ್ನೊಳಗೊಂಡ ಬಾಗಿನ ನೀಡುವುದರಿಂದ ದಾನ ಮಾಡುವ ಪುಣ್ಯ ಲಭಿಸುತ್ತದೆ ಎಂದರು.

ಈ ಸಂದರ್ಭದಲ್ಲಿ ದೇವನಗೂಲ್ ಗ್ರಾಮದ ಗೃಹೀನಿಯರಾದ ಸುಶೀಲಮ್ಮ, ಸೌಮ್ಯ, ಸುಧಾ, ಜಯಂತಿ, ಶ್ವೇತಾ, ಕುಸುಮ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು