5:17 AM Wednesday1 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಗೌರಿಹಬ್ಬ; ಕಾಫಿನಾಡಿನಲ್ಲಿ ವಿಶೇಷ ಗಂಗಾ ಪೂಜೆ, ಬಾಗಿನ ಸಮರ್ಪಿಸಿದ ಮಹಿಳೆಯರು, ಮಕ್ಕಳು

30/08/2022, 21:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಬಣಕಲ್, ಬಾಳೂರು, ಕೊಟ್ಟಿಗೆಹಾರ ಸುತ್ತಮುತ್ತ ಮಹಿಳೆಯರು, ಮಕ್ಕಳು ವಿಶೇಷ ಗಂಗೆ ಪೂಜೆ ನಡೆಸಿ ಬಾಗಿನ ಅರ್ಪಿಸಿ ಗೌರಿಹಬ್ಬ ಆಚರಿಸಿದರು.

ದೇವನಗೂಲ್ ಗ್ರಾಮದಲ್ಲಿ ಪೂಜೆ ನೆರವೇರಿಸಿ ಮಾತನಾಡಿದ ಗೃಹಿಣಿ ಯಶೋದಮ್ಮ, ಹಿಂದು ಸಂಪ್ರದಾಯದಲ್ಲಿ ವಿಶೇಷವಾಗಿ ಮಲೆನಾಡಿನ ಭಾಗದಲ್ಲಿ ಗೌರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಹಬ್ಬ ಮಹಿಳೆಯರ ಪಾಲಿಗೆ ಶ್ರೇಷ್ಠ ಹಬ್ಬವಾಗಿದೆ. ರಂಗೋಲಿಯ ಚಿತ್ತಾರ, ಸುಮಂಗಲಿಯರಿಗೆ ಹದಿನಾರು ಸುತ್ತಿನ ಗೌರಿ ದಾರ ಪೂಜಿಸಿ ಕೈಗೆ ಕಟ್ಟಿಕೊಳ್ಳುತ್ತಾರೆ. ಗೌರಿ ಹಬ್ಬದಂದು ಸುಮಂಗಲಿಯರಿಗೆ ನೀಡುವ ಬಾಗಿನ ಅತಿ ಶ್ರೇಷ್ಠವಾದುದು. ಅದಕ್ಕೆಂದೇ ಐದು ಮುತ್ತೈದೆಯರಿಗೆ ಈ ದಿನ ಬಾಗಿನ ನೀಡುವ ಸಂಪ್ರದಾಯವಿದೆ. ಅರಿಶಿಣ ಕುಂಕುಮ, ಹಸಿರುಬಳೆ, ಕರಿಮಣಿ ಬಾಚಣಿಗೆ, ಸೀರೆ ಅಥವಾ ಬ್ಲೌಸ್ ಪೀಸ್, ಕಾಯಿ ಹಣ್ಣು ಧಾನ್ಯಗಳನ್ನೊಳಗೊಂಡ ಬಾಗಿನ ನೀಡುವುದರಿಂದ ದಾನ ಮಾಡುವ ಪುಣ್ಯ ಲಭಿಸುತ್ತದೆ ಎಂದರು.

ಈ ಸಂದರ್ಭದಲ್ಲಿ ದೇವನಗೂಲ್ ಗ್ರಾಮದ ಗೃಹೀನಿಯರಾದ ಸುಶೀಲಮ್ಮ, ಸೌಮ್ಯ, ಸುಧಾ, ಜಯಂತಿ, ಶ್ವೇತಾ, ಕುಸುಮ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು