10:46 AM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಗೌರಿಹಬ್ಬ; ಕಾಫಿನಾಡಿನಲ್ಲಿ ವಿಶೇಷ ಗಂಗಾ ಪೂಜೆ, ಬಾಗಿನ ಸಮರ್ಪಿಸಿದ ಮಹಿಳೆಯರು, ಮಕ್ಕಳು

30/08/2022, 21:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಬಣಕಲ್, ಬಾಳೂರು, ಕೊಟ್ಟಿಗೆಹಾರ ಸುತ್ತಮುತ್ತ ಮಹಿಳೆಯರು, ಮಕ್ಕಳು ವಿಶೇಷ ಗಂಗೆ ಪೂಜೆ ನಡೆಸಿ ಬಾಗಿನ ಅರ್ಪಿಸಿ ಗೌರಿಹಬ್ಬ ಆಚರಿಸಿದರು.

ದೇವನಗೂಲ್ ಗ್ರಾಮದಲ್ಲಿ ಪೂಜೆ ನೆರವೇರಿಸಿ ಮಾತನಾಡಿದ ಗೃಹಿಣಿ ಯಶೋದಮ್ಮ, ಹಿಂದು ಸಂಪ್ರದಾಯದಲ್ಲಿ ವಿಶೇಷವಾಗಿ ಮಲೆನಾಡಿನ ಭಾಗದಲ್ಲಿ ಗೌರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಹಬ್ಬ ಮಹಿಳೆಯರ ಪಾಲಿಗೆ ಶ್ರೇಷ್ಠ ಹಬ್ಬವಾಗಿದೆ. ರಂಗೋಲಿಯ ಚಿತ್ತಾರ, ಸುಮಂಗಲಿಯರಿಗೆ ಹದಿನಾರು ಸುತ್ತಿನ ಗೌರಿ ದಾರ ಪೂಜಿಸಿ ಕೈಗೆ ಕಟ್ಟಿಕೊಳ್ಳುತ್ತಾರೆ. ಗೌರಿ ಹಬ್ಬದಂದು ಸುಮಂಗಲಿಯರಿಗೆ ನೀಡುವ ಬಾಗಿನ ಅತಿ ಶ್ರೇಷ್ಠವಾದುದು. ಅದಕ್ಕೆಂದೇ ಐದು ಮುತ್ತೈದೆಯರಿಗೆ ಈ ದಿನ ಬಾಗಿನ ನೀಡುವ ಸಂಪ್ರದಾಯವಿದೆ. ಅರಿಶಿಣ ಕುಂಕುಮ, ಹಸಿರುಬಳೆ, ಕರಿಮಣಿ ಬಾಚಣಿಗೆ, ಸೀರೆ ಅಥವಾ ಬ್ಲೌಸ್ ಪೀಸ್, ಕಾಯಿ ಹಣ್ಣು ಧಾನ್ಯಗಳನ್ನೊಳಗೊಂಡ ಬಾಗಿನ ನೀಡುವುದರಿಂದ ದಾನ ಮಾಡುವ ಪುಣ್ಯ ಲಭಿಸುತ್ತದೆ ಎಂದರು.

ಈ ಸಂದರ್ಭದಲ್ಲಿ ದೇವನಗೂಲ್ ಗ್ರಾಮದ ಗೃಹೀನಿಯರಾದ ಸುಶೀಲಮ್ಮ, ಸೌಮ್ಯ, ಸುಧಾ, ಜಯಂತಿ, ಶ್ವೇತಾ, ಕುಸುಮ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು