4:31 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಬಿಜೆಪಿ ಮುಖಂಡನ ದಾದಾಗಿರಿ: ಗದ್ದೆಯಲ್ಲಿ ನೀರು ನಿಲ್ಲುತ್ತದೆಯೆಂದು ರಸ್ತೆಯನ್ನೇ ಅಗೆದ ಜಿಪಂ ಮಾಜಿ ಸದಸ್ಯ!

30/08/2022, 23:36

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ತನ್ನ ಗದ್ದೆಯಲ್ಲಿ ನೀರು ನಿಲ್ಲುತ್ತೆ ಅಂತ ಬಿಜೆಪಿ ಮುಖಂಡರೊಬ್ಬರು ರಸ್ತೆಯನ್ನೇ ಅಗೆದು ಹಾಕಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶೆಗುಣಶಿ- ಯಬರಟ್ಟಿ ಗ್ರಾಮದಲ್ಲಿ ನಡೆದಿದೆ.

ಪೈಪ್ ಲೈನ್ ಬ್ಲಾಕ್ ಆಗಿದ್ದಕ್ಕೆ ಕಳೆದ ಒಂದು ವಾರದ ಹಿಂದೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತಮ್ಮಣ್ಣ ತೇಲಿ ರಸ್ತೆ ಅಗೆದಿದ್ದರು. ಜಿಲ್ಲಾ ಪಂಚಾಯಿತಿನ ಮಾಜಿ ಸದಸ್ಯನ ಅಂಧಾ ದರ್ಬಾರ್ ಗೆ ಸ್ಥಳೀಯರು ಬೆಚ್ಚಿ ಹೋಗಿದ್ದಾರೆ.

ತಮ್ಮಣ್ಣ ಅವರು ಶೇಗುಣಶಿ – ಯಬರಟ್ಟಿ ಸಂಪರ್ಕ ‌ಕಲ್ಪಿಸುವ ಜಿಲ್ಲಾ ಮುಖ್ಯ ರಸ್ತೆ ಅಗೆದಿದ್ದರು.

ನೀರು ಪಾಸ್ ಆಗಲೆಂದು ಕೆಳಗೆ ಪೈಪ್ ಲೈನ್ ಅವಳವಡಿಸಿ ಅಧಿಕಾರಿಗಳು ಮೇಲೆ ರಸ್ತೆ ‌ಮಾಡಿದ್ದರು. ಯಾರೋ ಕಿಡಿಗೇಡಿಗಳು ಪೈಪ್ ಒಳಗೆ ಕಲ್ಲು ಹಾಕಿದ್ದರಿಂದ ಪೈಪ್ ಲೈನ್ ಬ್ಲಾಕ್ ಆಗಿತ್ತು.

ಪೈಪ್ ಲೈನ್ ಬ್ಲಾಕ್ ಆಗಿದ್ದಕ್ಕೆ ಕಳೆದ ಒಂದು ವಾರದ ಹಿಂದೆ ತಮ್ಮಣ್ಣ ರಸ್ತೆ ಅಗೆದಿದ್ದರು.


ತಮ್ಮಣ್ಣನ ನಡೆಯಿಂದ ಎರಡೂ ಗ್ರಾಮದ ಜನರು ಬೇಸತ್ತು ಹೋಗಿದ್ದಾರೆ. ಶೆಗುಣಶಿ ಹಾಗೂ ಯಬರಟ್ಟಿ ಗ್ರಾಮಗಳ ಜನರು ಕಳೆದ ಒಂದು ವಾರದಿಂದ ಸಂಪರ್ಕ ಸಾಧ್ಯವಾಗದೆ ಪರದಾಟ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು