1:57 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಬಿಜೆಪಿ ಮುಖಂಡನ ದಾದಾಗಿರಿ: ಗದ್ದೆಯಲ್ಲಿ ನೀರು ನಿಲ್ಲುತ್ತದೆಯೆಂದು ರಸ್ತೆಯನ್ನೇ ಅಗೆದ ಜಿಪಂ ಮಾಜಿ ಸದಸ್ಯ!

30/08/2022, 23:36

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ತನ್ನ ಗದ್ದೆಯಲ್ಲಿ ನೀರು ನಿಲ್ಲುತ್ತೆ ಅಂತ ಬಿಜೆಪಿ ಮುಖಂಡರೊಬ್ಬರು ರಸ್ತೆಯನ್ನೇ ಅಗೆದು ಹಾಕಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶೆಗುಣಶಿ- ಯಬರಟ್ಟಿ ಗ್ರಾಮದಲ್ಲಿ ನಡೆದಿದೆ.

ಪೈಪ್ ಲೈನ್ ಬ್ಲಾಕ್ ಆಗಿದ್ದಕ್ಕೆ ಕಳೆದ ಒಂದು ವಾರದ ಹಿಂದೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತಮ್ಮಣ್ಣ ತೇಲಿ ರಸ್ತೆ ಅಗೆದಿದ್ದರು. ಜಿಲ್ಲಾ ಪಂಚಾಯಿತಿನ ಮಾಜಿ ಸದಸ್ಯನ ಅಂಧಾ ದರ್ಬಾರ್ ಗೆ ಸ್ಥಳೀಯರು ಬೆಚ್ಚಿ ಹೋಗಿದ್ದಾರೆ.

ತಮ್ಮಣ್ಣ ಅವರು ಶೇಗುಣಶಿ – ಯಬರಟ್ಟಿ ಸಂಪರ್ಕ ‌ಕಲ್ಪಿಸುವ ಜಿಲ್ಲಾ ಮುಖ್ಯ ರಸ್ತೆ ಅಗೆದಿದ್ದರು.

ನೀರು ಪಾಸ್ ಆಗಲೆಂದು ಕೆಳಗೆ ಪೈಪ್ ಲೈನ್ ಅವಳವಡಿಸಿ ಅಧಿಕಾರಿಗಳು ಮೇಲೆ ರಸ್ತೆ ‌ಮಾಡಿದ್ದರು. ಯಾರೋ ಕಿಡಿಗೇಡಿಗಳು ಪೈಪ್ ಒಳಗೆ ಕಲ್ಲು ಹಾಕಿದ್ದರಿಂದ ಪೈಪ್ ಲೈನ್ ಬ್ಲಾಕ್ ಆಗಿತ್ತು.

ಪೈಪ್ ಲೈನ್ ಬ್ಲಾಕ್ ಆಗಿದ್ದಕ್ಕೆ ಕಳೆದ ಒಂದು ವಾರದ ಹಿಂದೆ ತಮ್ಮಣ್ಣ ರಸ್ತೆ ಅಗೆದಿದ್ದರು.


ತಮ್ಮಣ್ಣನ ನಡೆಯಿಂದ ಎರಡೂ ಗ್ರಾಮದ ಜನರು ಬೇಸತ್ತು ಹೋಗಿದ್ದಾರೆ. ಶೆಗುಣಶಿ ಹಾಗೂ ಯಬರಟ್ಟಿ ಗ್ರಾಮಗಳ ಜನರು ಕಳೆದ ಒಂದು ವಾರದಿಂದ ಸಂಪರ್ಕ ಸಾಧ್ಯವಾಗದೆ ಪರದಾಟ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು