5:21 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಸಂಘನಿಕೇತನ ಗಣೇಶೋತ್ಸವಕ್ಕೆ ಅಮೃತ ಮಹೋತ್ಸವದ ವೈಭವ: ಸಂಭ್ರಮದ ಉದ್ಘಾಟನೆ

31/08/2022, 18:05

ಚಿತ್ರ: ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com) : ನಗರದ ಮಣ್ಣಗುಡ್ಡೆ ಯಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ಪ್ರತಿ ವರ್ಷ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಈ ಬಾರಿ ಅಮೃತ ಮಹೋತ್ಸವ ಸಂಭ್ರಮವಾಗಿದ್ದು, ಉದ್ಘಾಟನಾ ಸಮಾರಂಭ ಬುಧವಾರ ಭಕ್ತಿ ಸಂಭ್ರಮದಿಂದ ನಡೆಯಿತು.

ಇಂದಿನಿಂದ (ಆಗಸ್ಟ್ 31ರಿಂದ) ಸೆ.4ರವರೆಗೆ ಗಣೇಶೋತ್ಸವ ಜರುಗಲಿದೆ.

ಸಾರ್ವಜನಿಕ ಗಣೇಶ್ಜೋತ್ಸವದ ಉದ್ಘಾಟನೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಕಾರ್ಯವಾಹ ಮುಕುಂದ್ ಅವರು ನೆರವೇರಿಸಿದರು.  

ವಿವಿಧ  ಧಾರ್ಮಿಕ , ಸಂಸ್ಕ್ರತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಸದ್ಭಕ್ತ ರು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಪುನೀತರಾಗಬೇಕಾಗಿ ಸಮಿತಿಯು ವಿನಂತಿಸಿಕೊಂಡಿದೆ. 

ಧ್ವಜಾರೋಹಣ, ವಂದೇಮಾತರಂ ಉದ್ಘಾಟಕರ ಸಂದೇಶ, ಸಭಾ ಕಾರ್ಯಕ್ರಮ ನಡೆಯಿತು.


ಗಣಹೋಮ ಬಳಿಕ ಸಾಯಂಕಾಲ ಹರಿನಾಮ ಸಂಕೀರ್ತನೆ, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು. ರಾತ್ರಿ ಮೂಡಗಣಪತಿ ಸೇವೆ ಹಾಗೂ ರಂಗ ಪೂಜೆ ನಡೆದವು.  ಈ ಸಂದರ್ಭದಲ್ಲಿ ಸಂಘ ಚಾಲಕರಾದ ಡಾ .ವಾಮನ್  ಶೆಣೈ, ಸುನಿಲ್ ಆಚಾರ್ , ಡಾ . ಕಲಡ್ಕ ಪ್ರಭಾಕರ್ ಭಟ್ , ಗೌರವ ಅಧ್ಯಕ್ಷ ಪಿ . ರವೀಂದ್ರ ಪೈ, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ , ಪ್ರಧಾನ ಕಾರ್ಯದರ್ಶಿ ಎಂ . ಸತೀಶ್ ಪ್ರಭು , ಸುರೇಶ ಕಾಮತ್ , ಜೀವನರಾಜ್  ಶೆಣೈ  ಉಪಾಧ್ಯಕ್ಷರಾದ ಜೆ . ಕೆ. ರಾವ್ , ಆನಂದ ಪಾಂಗಳ , ಕೆ. ಪಿ. ಟೈಲರ್ , ಅಭಿಷೇಕ್ ಭಂಡಾರಿ ,   ಕೇಶವ  ಸ್ಮ್ರತಿ ಸಂವರ್ಧನ ಸಮಿತಿಯ ವಿನೋದ್ ಶೆಣೈ , ರಘುವೀರ್ ಕಾಮತ್ , ಯಸ್ ಆರ್ ಕುಡ್ವ , ಗಣೇಶ್ ಪ್ರಸಾದ್ , ಜಯಪ್ರಕಾಶ್ ಮಂಗಳಾದೇವಿ ಸ್ವಾಮಿಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು