6:43 AM Monday21 - July 2025
ಬ್ರೇಕಿಂಗ್ ನ್ಯೂಸ್
ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು

ಇತ್ತೀಚಿನ ಸುದ್ದಿ

ಸಂಘನಿಕೇತನ ಗಣೇಶೋತ್ಸವಕ್ಕೆ ಅಮೃತ ಮಹೋತ್ಸವದ ವೈಭವ: ಸಂಭ್ರಮದ ಉದ್ಘಾಟನೆ

31/08/2022, 18:05

ಚಿತ್ರ: ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com) : ನಗರದ ಮಣ್ಣಗುಡ್ಡೆ ಯಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ಪ್ರತಿ ವರ್ಷ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಈ ಬಾರಿ ಅಮೃತ ಮಹೋತ್ಸವ ಸಂಭ್ರಮವಾಗಿದ್ದು, ಉದ್ಘಾಟನಾ ಸಮಾರಂಭ ಬುಧವಾರ ಭಕ್ತಿ ಸಂಭ್ರಮದಿಂದ ನಡೆಯಿತು.

ಇಂದಿನಿಂದ (ಆಗಸ್ಟ್ 31ರಿಂದ) ಸೆ.4ರವರೆಗೆ ಗಣೇಶೋತ್ಸವ ಜರುಗಲಿದೆ.

ಸಾರ್ವಜನಿಕ ಗಣೇಶ್ಜೋತ್ಸವದ ಉದ್ಘಾಟನೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಕಾರ್ಯವಾಹ ಮುಕುಂದ್ ಅವರು ನೆರವೇರಿಸಿದರು.  

ವಿವಿಧ  ಧಾರ್ಮಿಕ , ಸಂಸ್ಕ್ರತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಸದ್ಭಕ್ತ ರು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಪುನೀತರಾಗಬೇಕಾಗಿ ಸಮಿತಿಯು ವಿನಂತಿಸಿಕೊಂಡಿದೆ. 

ಧ್ವಜಾರೋಹಣ, ವಂದೇಮಾತರಂ ಉದ್ಘಾಟಕರ ಸಂದೇಶ, ಸಭಾ ಕಾರ್ಯಕ್ರಮ ನಡೆಯಿತು.


ಗಣಹೋಮ ಬಳಿಕ ಸಾಯಂಕಾಲ ಹರಿನಾಮ ಸಂಕೀರ್ತನೆ, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು. ರಾತ್ರಿ ಮೂಡಗಣಪತಿ ಸೇವೆ ಹಾಗೂ ರಂಗ ಪೂಜೆ ನಡೆದವು.  ಈ ಸಂದರ್ಭದಲ್ಲಿ ಸಂಘ ಚಾಲಕರಾದ ಡಾ .ವಾಮನ್  ಶೆಣೈ, ಸುನಿಲ್ ಆಚಾರ್ , ಡಾ . ಕಲಡ್ಕ ಪ್ರಭಾಕರ್ ಭಟ್ , ಗೌರವ ಅಧ್ಯಕ್ಷ ಪಿ . ರವೀಂದ್ರ ಪೈ, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ , ಪ್ರಧಾನ ಕಾರ್ಯದರ್ಶಿ ಎಂ . ಸತೀಶ್ ಪ್ರಭು , ಸುರೇಶ ಕಾಮತ್ , ಜೀವನರಾಜ್  ಶೆಣೈ  ಉಪಾಧ್ಯಕ್ಷರಾದ ಜೆ . ಕೆ. ರಾವ್ , ಆನಂದ ಪಾಂಗಳ , ಕೆ. ಪಿ. ಟೈಲರ್ , ಅಭಿಷೇಕ್ ಭಂಡಾರಿ ,   ಕೇಶವ  ಸ್ಮ್ರತಿ ಸಂವರ್ಧನ ಸಮಿತಿಯ ವಿನೋದ್ ಶೆಣೈ , ರಘುವೀರ್ ಕಾಮತ್ , ಯಸ್ ಆರ್ ಕುಡ್ವ , ಗಣೇಶ್ ಪ್ರಸಾದ್ , ಜಯಪ್ರಕಾಶ್ ಮಂಗಳಾದೇವಿ ಸ್ವಾಮಿಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು