5:27 PM Tuesday22 - July 2025
ಬ್ರೇಕಿಂಗ್ ನ್ಯೂಸ್
Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ…

ಇತ್ತೀಚಿನ ಸುದ್ದಿ

ಪ್ರಧಾನಿ ನಾಳೆ ಮಂಗಳೂರಿಗೆ: 3,800 ಕೋಟಿ ಮೊತ್ತದ 8 ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ

01/09/2022, 20:11

ಮಂಗಳೂರು(reporterkarnataka.com): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೆ.2ರ ಶುಕ್ರವಾರ  ಮಂಗಳೂರಿಗೆ ಭೇಟಿ ನೀಡುತ್ತಿದ್ದು ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸುವರು.

ನಗರದ  ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಮಧ್ಯಾಹ್ನ 1.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ  3,800  ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನಡೆಯಲಿದೆ.

ಪ್ರಧಾನಿ ಲೋಕಾರ್ಪಣೆ ಮಾಡುವ ಯೋಜನೆಗಳಲ್ಲಿ, ಕಂಟೇನರ್ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14 ರ ಯಾಂತ್ರೀಕರಣ ( 281 ಕೋಟಿ ರೂ.), ಬಿಎಸ್ VI ಉನ್ನತೀಕರಣ ಯೋಜನೆ (1829 ಕೋಟಿ ರೂ.), ಸಮುದ್ರ ನೀರಿನ ನಿರ್ಲವಣೀಕರಣ ಘಟಕ (677 ಕೋಟಿ ರೂ.) ಗಳು ಸೇರಿವೆ. 

ಇದೇ ಸಂದರ್ಭದಲ್ಲಿ ನರೇಂದ್ರ ಮೋದಿ, ಎನ್ಎಂಪಿಟಿಯಲ್ಲಿ ಸಮಗ್ರ ಎಲ್ಪಿಜಿ ಹಾಗೂ ಬೃಹತ್ ಪಿಓಎಲ್ ಸೌಲಭ್ಯ  (ಅಂದಾಜು ವೆಚ್ಚ ರೂ. 500 ಕೋಟಿ), ಶೇಖರಣಾ ಟ್ಯಾಂಕ್ಗಳು ಹಾಗೂ ಖಾದ್ಯ ತೈಲ ಸಂಸ್ಕರಣಾಗಾರ ನಿರ್ಮಾಣ ( 100 ಕೋಟಿ ರೂ.), ಬಿಟುಮಿನ್ ಶೇಖರಣಾ ಟ್ಯಾಂಕ್ ಘಟಕಗಳ ನಿರ್ಮಾಣ  100 ಕೋಟಿ ರೂ.) ಹಾಗೂ ಬಿಟುಮಿನ್, ಖಾದ್ಯ ತೈಲ ಶೇಖರಣಾ ಟ್ಯಾಂಕ್ಗಳು ಹಾಗೂ ಸಂಬಂಧಿತ ಸೌಲಭ್ಯಗಳ ನಿರ್ಮಾಣ (ರೂ. 100 ಕೋಟಿ) ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಜೊತೆಗೆ, ಕುಳಾಯಿಯಲ್ಲಿ ಇಪಿಸಿ ಮಾದರಿಯಲ್ಲಿ ಮೀನುಗಾರಿಕಾ ಬಂದರು ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಮಾಡಲಿದ್ದಾರೆ.


ಈ ಸಂದರ್ಭದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ, ಬಂದರು, ಹಡಗು ಮತ್ತು ಜಲಸಾರಿಗೆ ಹಾಗೂ ಆಯುಷ್ ಸಚಿವ ಸರ್ಬಾನಂದ್ ಸೋನೋವಾಲ್, ಇಂಧನ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ, ಬಂದರು, ಹಡಗು ಮತ್ತು ಜಲಸಾರಿಗೆ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್  ಹಾಗೂ ಶಂತನು ಠಾಕೂರ್ ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು