5:59 PM Sunday28 - June 2026
ಬ್ರೇಕಿಂಗ್ ನ್ಯೂಸ್
ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು…

ಇತ್ತೀಚಿನ ಸುದ್ದಿ

ಪ್ರಧಾನಿ ನಾಳೆ ಮಂಗಳೂರಿಗೆ: 3,800 ಕೋಟಿ ಮೊತ್ತದ 8 ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ

01/09/2022, 20:11

ಮಂಗಳೂರು(reporterkarnataka.com): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೆ.2ರ ಶುಕ್ರವಾರ  ಮಂಗಳೂರಿಗೆ ಭೇಟಿ ನೀಡುತ್ತಿದ್ದು ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸುವರು.

ನಗರದ  ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಮಧ್ಯಾಹ್ನ 1.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ  3,800  ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನಡೆಯಲಿದೆ.

ಪ್ರಧಾನಿ ಲೋಕಾರ್ಪಣೆ ಮಾಡುವ ಯೋಜನೆಗಳಲ್ಲಿ, ಕಂಟೇನರ್ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14 ರ ಯಾಂತ್ರೀಕರಣ ( 281 ಕೋಟಿ ರೂ.), ಬಿಎಸ್ VI ಉನ್ನತೀಕರಣ ಯೋಜನೆ (1829 ಕೋಟಿ ರೂ.), ಸಮುದ್ರ ನೀರಿನ ನಿರ್ಲವಣೀಕರಣ ಘಟಕ (677 ಕೋಟಿ ರೂ.) ಗಳು ಸೇರಿವೆ. 

ಇದೇ ಸಂದರ್ಭದಲ್ಲಿ ನರೇಂದ್ರ ಮೋದಿ, ಎನ್ಎಂಪಿಟಿಯಲ್ಲಿ ಸಮಗ್ರ ಎಲ್ಪಿಜಿ ಹಾಗೂ ಬೃಹತ್ ಪಿಓಎಲ್ ಸೌಲಭ್ಯ  (ಅಂದಾಜು ವೆಚ್ಚ ರೂ. 500 ಕೋಟಿ), ಶೇಖರಣಾ ಟ್ಯಾಂಕ್ಗಳು ಹಾಗೂ ಖಾದ್ಯ ತೈಲ ಸಂಸ್ಕರಣಾಗಾರ ನಿರ್ಮಾಣ ( 100 ಕೋಟಿ ರೂ.), ಬಿಟುಮಿನ್ ಶೇಖರಣಾ ಟ್ಯಾಂಕ್ ಘಟಕಗಳ ನಿರ್ಮಾಣ  100 ಕೋಟಿ ರೂ.) ಹಾಗೂ ಬಿಟುಮಿನ್, ಖಾದ್ಯ ತೈಲ ಶೇಖರಣಾ ಟ್ಯಾಂಕ್ಗಳು ಹಾಗೂ ಸಂಬಂಧಿತ ಸೌಲಭ್ಯಗಳ ನಿರ್ಮಾಣ (ರೂ. 100 ಕೋಟಿ) ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಜೊತೆಗೆ, ಕುಳಾಯಿಯಲ್ಲಿ ಇಪಿಸಿ ಮಾದರಿಯಲ್ಲಿ ಮೀನುಗಾರಿಕಾ ಬಂದರು ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಮಾಡಲಿದ್ದಾರೆ.


ಈ ಸಂದರ್ಭದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ, ಬಂದರು, ಹಡಗು ಮತ್ತು ಜಲಸಾರಿಗೆ ಹಾಗೂ ಆಯುಷ್ ಸಚಿವ ಸರ್ಬಾನಂದ್ ಸೋನೋವಾಲ್, ಇಂಧನ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ, ಬಂದರು, ಹಡಗು ಮತ್ತು ಜಲಸಾರಿಗೆ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್  ಹಾಗೂ ಶಂತನು ಠಾಕೂರ್ ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು